ದೇಶಕ್ಕೆ ಗಂಡಾಂತರ ಎದುರಾದಾಗ ಯುದ್ಧ ಮಾಡದೆ ಕೈ ಕಟ್ಟಿ ಕೂರಲಾದೀತೆ? ಅರ್ ಬಿ ತಿಮ್ಮಾಪುರ

ಅರುಣ್​ ಕುಮಾರ್​ ಬೆಳ್ಳಿ

Updated on: Apr 29, 2025 | 2:56 PM

ನಿನ್ನೆ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಪೊಲೀಸ್ ಅಧಿಕಾರಿಯ ಮೇಲೆ ಕೈ ಮಾಡಲು ಮುಂದಾಗಿದ್ದನ್ನು ಸಚಿವ ತಿಮ್ಮಾಪುರ ಡೌನ್ ಪ್ಲೇ ಮಾಡಿದರು. ಹಿಂದೆ, ಬಿಎಸ್ ಯಡಿಯೂರಪ್ಪನವರು ಐಎಎಸ್ ಅಧಿಕಾರಿಗಳ ಮೇಲೆ ಕೈ ಮಾಡಿದ್ದು ತನಗೆ ಗೊತ್ತಿದೆ, ಈ ಮಾತನ್ನು ಬಿವೈ ವಿಜಯೇಂದ್ರ ಅಲ್ಲಗಳೆಯುತ್ತಾರಾ? ಎಂದು ಪ್ರಶ್ನಿಸಿದ ತಿಮ್ಮಾಪುರ, ಸಿಎಂ ಸಿದ್ದರಾಮಯ್ಯ ಯಾವ ಒತ್ತಡದಲ್ಲೂ ಇಲ್ಲ ಎಂದು ಹೇಳಿದರು.

ಬಾಗಲಕೋಟೆ, ಏಪ್ರಿಲ್ 29: ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ತಮ್ಮ ವಾದವನ್ನು ಬಿಡಲಾರರು. ಪಾಕಿಸ್ತಾನದೊಂದಿಗೆ ಯುದ್ಧ (war against Pakistan) ಬೇಕೇ ಬೇಡವೇ ಎಂಬ ಪ್ರಶ್ನೆಗೆ ಅವರು ಮೊನ್ನೆ ಹೇಳಿದ್ದನ್ನೇ ಇವತ್ತು ಕೊಂಚ ಮಾಡಿಫೈ ಮಾಡಿ ಹೇಳಿದರು. ದೇಶದ ಪರಿಸ್ಥಿತಿ ಏನು ಅನ್ನೋದು ಪ್ರಧಾನಿಯವರಿಗೆ ಚೆನ್ನಾಗಿ ಗೊತ್ತು, ಅವರು ನಿರ್ಧಾರ ತೆಗೆದುಕೊಳ್ಳಲಿ ನಾವು ಬದ್ಧತೆಯನ್ನು ತೋರಿಸುತ್ತೇವೆ ಎಂದು ಅವರು ಹೇಳಿದರು. ಯುದ್ಧದ ಅವಶ್ಯಕತೆಯಿದೆಯಾ ಅಂತ ಯೋಚಿಸಬೇಕಾಗಿದೆ ಎಂದಷ್ಟೇ ತಾನು ಹೇಳಿದ್ದು, ದೇಶಕ್ಕೆ ಗಂಡಾಂತರ ಎದುರಾದಾಗ ಯುದ್ಧ ಮಾಡದೆ ಸುಮ್ಮನೆ ಕೂರಲಾದೀತೆ ಎಂದು ತಿಮ್ಮಾಪುರ ಹೇಳಿದರು.

ಇದನ್ನೂ ಓದಿ:  ಕೆಡಿಪಿ ಸಭೆಯಿಂದ ಅಧಿಕಾರಿಯೊಬ್ಬರನ್ನು ಹೊರ ಹಾಕಿದ ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.