ಜೀವಂತ ಸಿದ್ದರಾಮಯ್ಯನೇ ನಮಗೆ ಬೇಕಿಲ್ಲ, ಇನ್ನು ನಾಯಿಯೂ ಮೂಸದ ಅವರ ಹೆಣ ತಗೊಂಡು ಏನು ಮಾಡೋಣ? ಕೆಎಸ್ ಈಶ್ವರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Jan 31, 2023 | 12:37 PM

ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ವ್ಯಕ್ತಿಯೊಬ್ಬರು ಒಂದು ಪಕ್ಷದ ಅಧ್ಯಕ್ಷರ ಬಗ್ಗೆ ಅಂಥ ಪದಗಳನ್ನು ಬಳಸುವುದು ಆವರ ಘನತೆಗೆ ಶೋಭೆ ನೀಡೋದಿಲ್ಲ ಎಂದರು.

ಶಿವಮೊಗ್ಗ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು (Nalin Kumar Kateel) ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಬಫೂನ್ ಅಂತ ಕರೆದಿದ್ದು ಪಕ್ಷದ ಶಾಸಕ ಕೆ ಎಸ್ ಈಶ್ವರಪ್ಪಗೆ (KS Eshwarappa) ಸಿಟ್ಟು ತರಿಸಿದೆ. ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ವ್ಯಕ್ತಿಯೊಬ್ಬರು ಒಂದು ಪಕ್ಷದ ಅಧ್ಯಕ್ಷರ ಬಗ್ಗೆ ಅಂಥ ಪದಗಳನ್ನು ಬಳಸುವುದು ಆವರ ಘನತೆಗೆ ಶೋಭೆ ನೀಡೋದಿಲ್ಲ ಎಂದರು. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಅವರಿಗೆ, ತಮ್ಮ ಹೆಣ ಕೂಡ ಬಿಜೆಪಿ ಪಕ್ಷಕ್ಕೆ ಹೋಗೋದಿಲ್ಲ ಅಂತ ಸಿದ್ದರಾಮಯ್ಯ ಹೇಳಿರುವ ವಿಷಯವನ್ನು ಗಮನಕ್ಕೆ ತಂದಾಗ, ‘ಜೀವಂತ ಸಿದ್ದರಾಮಯ್ಯನೇ ನಮಗೆ ಬೇಕಿಲ್ಲ, ಅವರ ಹೆಣ ತೆಗೆದುಕೊಂಡು ಏನು ಮಾಡೋಣ? ನಾಯಿಯೂ ಅವರ ಹೆಣ ಮೂಸಿ ನೋಡೋದಿಲ್ಲ,’ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.