ಬೆಳಗಾವಿ ಅಧಿವೇಶನ; ಸಿದ್ದರಾಮಯ್ಯ ಜೊತೆ ನಾವಿದ್ದೇವೆ, ಹೆದರುವ ಅವಶ್ಯಕತೆಯಿಲ್ಲ ಅಂತ ಬಸನಗೌಡ ಯತ್ನಾಳ್ ಹೇಳಿದ್ದು ಯಾಕೆ?

ಅರುಣ್​ ಕುಮಾರ್​ ಬೆಳ್ಳಿ

Updated on: Dec 05, 2023 | 7:24 PM

ಡಿಕೆ ಶಿವಕುಮಾರ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಹಾವು ಮುಂಗುಸಿ ಸಂಬಂಧವಿದೆ. ಉಪ ಮುಖ್ಯಮಂತ್ರಿ ಇವತ್ತು ಸದನದಲ್ಲಿರಲಿಲ್ಲ, ಆದರೆ ಯತ್ನಾಳ್ ಮಾತಾಡಿದ್ದನ್ನು ಟಿವಿಯಲ್ಲಿ ನೋಡಿರುತ್ತಾರೆ ಇಲ್ಲವೇ ರಾತ್ರಿ ನೋಡುತ್ತಾರೆ. ಉಪ ಮುಖ್ಯಮಂತ್ರಿಯನ್ನು ಕೆಣಕಲೆಂದೇ ಯತ್ನಾಳ್ ಇಂದು ಸದನದಲ್ಲಿ ಹಾಗೆ ಮಾತಾಡಿದ್ದು. ಆದರೆ, ಸೀಸನ್ಡ್ ಪೊಲಿಟಿಶಿಯನ್ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಯತ್ನಾಳ್ ಮಾತಿನ ಮರ್ಮ ಅರಿಯರೇ?

ಬೆಳಗಾವಿ: ಚಳಿಗಾಲದ ವಿಧಾನಸಭಾ ಅಧಿವೇಶನ ರಂಗೇರುತ್ತಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಸದನದಲ್ಲಿ ಮಾತಾಡಲು ಎದ್ದು ನಿಂತರೆ ಗಂಭೀರ ವಿಷಯಗಳನ್ನು ಪ್ರಸ್ತಾಪಿಸುತ್ತಾ ಸಚಿವರ, ಮುಖ್ಯಮಂತ್ರಿ ಇಲ್ಲ ಉಪ ಮುಖ್ಯಮಂತ್ರಿಯ ಕಾಲೆಳೆಯುತ್ತಾರೆ. ಇವತ್ತು ಸಿದ್ದರಾಮಯ್ಯನವರೇ (Siddaramaiah) ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಅಂತ ಹೇಳಿದ್ದು ನಿಸ್ಸಂದೇಹವಾಗಿ ಡಿಕೆ ಶಿವಕುಮಾರ್ (DK Shivakumar) ಮತ್ತು ಅವರ ಪರವಾಗಿರುವ ಶಾಸಕರನ್ನು ಛೇಡಿಸಲು. ಸಿದ್ದರಾಮಯ್ಯ ಕುರಿತು ಮಾತಾಡಿದ ಯತ್ನಾಳ್, ಅವರು ಮೊದಲಿನ ಸಿದ್ದರಾಮಯ್ಯ ಅಲ್ಲ ಅಂತ ಜನಸಾಮಾನ್ಯನಿಗೂ ಗೊತ್ತಾಗಿದೆ, ಅವರು ಮೊದಲಿನ ಹಾಗಿದ್ದರೆ ಆಡಳಿತ ಮತ್ತು ರಾಜ್ಯದ ಬರದ ಸ್ಥಿತಿ ಹೀಗಿರುತ್ತಿರಲಿಲ್ಲ. ಅವರು ಮಂಕಾಗಿರೋದ್ರಿಂದಲೇ ಸ್ಥಿತಿ ಬಿಗಡಾಯಿಸಿದೆ, ಸಿದ್ದರಾಮಯ್ಯ ಯಾರಿಗೂ, ಯಾವುದಕ್ಕೂ ಹೆದರುವ ಅಗತ್ಯವಿಲ್ಲ, ನಾವೆಲ್ಲ ಅವರೊಂದಿಗಿದ್ದೇವೆ ಅಂತ ಬಸನಗೌಡ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.