AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿಗಾಗಿ ಹಾಹಾಕಾರ ಶುರುವಾಗಿದ್ದರೆ ಡಿಕೆ ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನರಾಗಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ

ನೀರಿಗಾಗಿ ಹಾಹಾಕಾರ ಶುರುವಾಗಿದ್ದರೆ ಡಿಕೆ ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನರಾಗಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Sep 22, 2023 | 6:37 PM

Share

ನಮ್ಮನ್ನು ಸಭೆಗೆ ಕರೆಸಿ ಕಾಫಿ, ಬಾದಾಮಿ ಕೊಟ್ಟರೆ ಕಾವೇರಿ ನದಿ ನೀರಿನ ಸಮಸ್ಯೆ ಬಗೆಹರಿಯದು ಎಂದ ಕುಮಾರಸ್ವಾಮಿ, ರಾಜ್ಯದಲ್ಲಿ 7 ಜನ ನಿವೃತ್ತ ಅಡ್ವೋಕೇಟ್ ಜನರಲ್ ಗಳಿದ್ದಾರೆ, ಹಲವಾರು ನಿವೃತ್ತ ನ್ಯಾಯಾಧೀಶರಿದ್ದಾರೆ, ಸರ್ಕಾರ ಅವರೊಂದಿಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಅಂತ ಹೇಳಿದರು. ಶಿವಕುಮಾರ್​ ಗೆ ಬ್ರ್ಯಾಂಡ್ ಬೆಂಗಳೂರು ಸಾಕಾರಗೊಳಿಸುವುದು ಸಾಧ್ಯವಿಲ್ಲ, ಅಸಲಿಗೆ ಬೆಂಗಳೂರು ಹಾಳಾಗಿದ್ದೇ ಇವರಿಂದ ಎಂದು ಕುಮಾರಸ್ವಾಮಿ ಜರಿದರು.     

ದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ (alliance) ಮಾಡಿಕೊಳ್ಳುವ ಉದ್ದೇಶದಿಂದ ಇಂದು ದೆಹಲಿಯಲ್ಲಿ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಗೆ (HD Kumaraswamy) ಡಿಕೆ ಶಿವಕುಮಾರ್ (DK Shivakumar) ಎಲ್ಲಿಲ್ಲದ ಕೋಪವುಕ್ಕಿ ತರಾಟೆಗೆ ತೆಗೆದುಕೊಂಡರು. ರೈತರ ಹಿತಾಸಕ್ತಿ ಕಾಯುವುದು ಇವರಿಗೆ ಸಾಧ್ಯವಾಗುತ್ತಿಲ್ಲ, ರೈತರಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದ್ದರೂ ಇವರು ಯಾವುದೋ ಸ್ಕೀಮ್ ಮೂಲಕ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನರಾಗಿದ್ದಾರೆ, ನಮ್ಮನ್ನು ಸಭೆಗೆ ಕರೆಸಿ ಕಾಫಿ, ಬಾದಾಮಿ ಕೊಟ್ಟರೆ ಕಾವೇರಿ ನದಿ ನೀರಿನ ಸಮಸ್ಯೆ ಬಗೆಹರಿಯದು ಎಂದ ಕುಮಾರಸ್ವಾಮಿ, ರಾಜ್ಯದಲ್ಲಿ 7 ಜನ ನಿವೃತ್ತ ಅಡ್ವೋಕೇಟ್ ಜನರಲ್ ಗಳಿದ್ದಾರೆ, ಹಲವಾರು ನಿವೃತ್ತ ನ್ಯಾಯಾಧೀಶರಿದ್ದಾರೆ, ಸರ್ಕಾರ ಅವರೊಂದಿಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಅಂತ ಹೇಳಿದರು. ಶಿವಕುಮಾರ್​ ಗೆ ಬ್ರ್ಯಾಂಡ್ ಬೆಂಗಳೂರು ಸಾಕಾರಗೊಳಿಸುವುದು ಸಾಧ್ಯವಿಲ್ಲ, ಅಸಲಿಗೆ ಬೆಂಗಳೂರು ಹಾಳಾಗಿದ್ದೇ ಇವರಿಂದ ಎಂದು ಕುಮಾರಸ್ವಾಮಿ ಜರಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.