ಮೈಸೂರು: ರಾಮಮಂದಿರ ನಿರ್ಮಾಣಕ್ಕೆ ವಿರೋಧಿಸುತ್ತಿರುವ ಸ್ಥಳೀಯರು ಹೇಳೋದೇನು?

ಅರುಣ್​ ಕುಮಾರ್​ ಬೆಳ್ಳಿ

Updated on: May 24, 2025 | 10:31 AM

ರಾಮದಾಸ್ ಸಹೋದರ ಸುರೇಶ್ ಅವರು, ಈ ಸ್ಥಳದಲ್ಲಿ ರಾಮಮಂದಿರ ನಿರ್ಮಾಣವಾದರೆ, ಇಲ್ಲದ ಸಮಸ್ಯೆಗಳನ್ನು ಸೃಷ್ಟಿಸುತ್ತದೆ, ಉತ್ತರ ಪ್ರದೇಶದ ಉದಾಹರಣೆ ನಮ್ಮ ಮುಂದಿದೆ, ಜನ ಇಲ್ಲಿ ಸಮಾನತೆ ಮತ್ತು ಸಹಬಾಳ್ವೆಯೊಂದಿಗೆ ಜೀವಿಸುತ್ತಿದ್ದಾರೆ, ಮಂದಿರದ ಬದಲು ಇಲ್ಲಿ ದಕ್ಷಿಣದ ನಳಂದ ವಿಶ್ವವಿದ್ಯಾಲಯ ನಿರ್ಮಿಸಲಿ, ಇದರಿಂದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗುತ್ತದೆ, ಯೂನಿರ್ವಸಿಟಿ ಸ್ಥಾಪಿಸಲು ಒಂದು ಎಕರೆ ಜಮೀನು ನಾನು ಕೊಡುತ್ತೇನೆ ಎನ್ನುತ್ತಾರೆ.

ಮೈಸೂರು, ಮೇ 24: ಜಿಲ್ಲೆಯ ಜಯಪುರ ಹೋಬಳಿಯಲ್ಲಿರುವ ಹಾರೋಹಳ್ಳಿಯ ರಾಮ್​ದಾಸ್ ಅವರ ಜಮೀನಲ್ಲಿ ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತಲು ಶಿಲೆ ಸಿಕ್ಕಿದ್ದು ಎಲ್ಲರಿಗೂ ಗೊತ್ತಿದೆ. ಹಾಗಾಗೇ ಅವರು ತಮ್ಮ ಜಮೀನಿನಲ್ಲಿ ದಕ್ಷಿಣದ ರಾಮಮಂದಿರ (South Ram Mandir) ಕಟ್ಟಲು ಉತ್ಸುಕರಾಗಿದ್ದಾರೆ ಮತ್ತು ಅದಕ್ಕೆ ಬೇಕಾದ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಸ್ಥಳದಲ್ಲಿ ರಾಮಮಂದಿರ ನಿರ್ಮಿಸಲು ಕೋರ್ಟ್ ತಡೆಯಾಜ್ಞೆ ನೀಡಿದೆ ಮತ್ತು ರಾಮದಾಸ್ ಅವರ ಸಹೋದರ ಸುರೇಶ್ ಸೇರಿದಂತೆ ಸ್ಥಳೀಯರ ಒಂದು ಗುಂಪು ಮಂದಿರ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ನಮ್ಮ ಮೈಸೂರು ವರದಿಗಾರ ವಿರೋಧ ಮಾಡುತ್ತಿರುವವರ ಜೊತೆ ಮಾತಾಡಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಮತ್ತೊಂದು ಪುಟ್ಟ ರಾಮಲಲ್ಲಾನ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್, ಫೋಟೋ ವೈರಲ್  

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.