Daily Devotional: ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?

Updated on: Apr 19, 2026 | 6:31 AM

ತಂದೆ-ತಾಯಿಗಳು ಮೊದಲ ಗುರುಗಳಾದರೆ, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಉದ್ಯೋಗದಲ್ಲಿ ಮಾರ್ಗದರ್ಶನ ನೀಡುವವರು ಸಹ ಗುರುಗಳೇ. ಪರಿಪೂರ್ಣ ಜೀವನ ಮತ್ತು ಮಾನಸಿಕ ನೆಮ್ಮದಿಗಾಗಿ ಗುರುವಿನ ಆಶ್ರಯ ಅಗತ್ಯ. ಗುರುವು ಅಂಧಕಾರವನ್ನು (ಗು) ಹೋಗಲಾಡಿಸಿ (ಋ) ಜ್ಞಾನದ ದಾರಿಯನ್ನು ತೋರಿಸುವವನು. ಗುರುವಿನ ಕೃಪೆ ಇದ್ದರೆ ನವಗ್ರಹ ದೋಷಗಳು ನಿವಾರಣೆಯಾಗುತ್ತವೆ ಮತ್ತು ಜೀವನದ ಕಷ್ಟಗಳು ದೂರವಾಗುತ್ತವೆ. ಗುರು ಪೂರ್ಣಿಮೆಯಂದು ಮಾತ್ರವಲ್ಲದೆ, ಪ್ರತಿನಿತ್ಯವೂ ಗುರುವಿನ ಸ್ಮರಣೆ ಮತ್ತು ಮಾರ್ಗದರ್ಶನ ನಮ್ಮನ್ನು ಸನ್ಮಾರ್ಗದಲ್ಲಿ ನಡೆಸುತ್ತದೆ. ಹೀಗಾಗಿ ಮನುಷ್ಯನ ಜೀವನದುದ್ದಕ್ಕೂ ಗುರುವಿನ ಅನುಗ್ರಹ ಬೇಕೇ ಬೇಕು ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.

ಜೀವನ ಪೂರ್ತಿ ಮನುಷ್ಯನಿಗೆಗುರುವಿನ ಅನುಗ್ರಹ ಬೇಕಾ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಾವು ಹುಟ್ಟಿದ ಕ್ಷಣದಿಂದ ಸಾವಿನವರೆಗೂ ದೇವರ ಅನುಗ್ರಹ, ತಂದೆ-ತಾಯಿಗಳ ಆಶೀರ್ವಾದದ ಜೊತೆಗೆ, ಗುರುವಿನ ಅನುಗ್ರಹವು ಅತ್ಯಂತ ಮಹತ್ವದ್ದಾಗಿದೆ. “ಹರ ಮುನಿದರೂ ಗುರು ಕಾಯುವನು” ಎಂಬ ನುಡಿಯು ಗುರುವಿನ ಸರ್ವೋಚ್ಚ ಸ್ಥಾನವನ್ನು ಸಾರುತ್ತದೆ.

ತಂದೆ-ತಾಯಿಗಳು ಮೊದಲ ಗುರುಗಳಾದರೆ, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಉದ್ಯೋಗದಲ್ಲಿ ಮಾರ್ಗದರ್ಶನ ನೀಡುವವರು ಸಹ ಗುರುಗಳೇ. ಪರಿಪೂರ್ಣ ಜೀವನ ಮತ್ತು ಮಾನಸಿಕ ನೆಮ್ಮದಿಗಾಗಿ ಗುರುವಿನ ಆಶ್ರಯ ಅಗತ್ಯ. ಗುರುವು ಅಂಧಕಾರವನ್ನು (ಗು) ಹೋಗಲಾಡಿಸಿ (ಋ) ಜ್ಞಾನದ ದಾರಿಯನ್ನು ತೋರಿಸುವವನು. ಗುರುವಿನ ಕೃಪೆ ಇದ್ದರೆ ನವಗ್ರಹ ದೋಷಗಳು ನಿವಾರಣೆಯಾಗುತ್ತವೆ ಮತ್ತು ಜೀವನದ ಕಷ್ಟಗಳು ದೂರವಾಗುತ್ತವೆ. ಗುರು ಪೂರ್ಣಿಮೆಯಂದು ಮಾತ್ರವಲ್ಲದೆ, ಪ್ರತಿನಿತ್ಯವೂ ಗುರುವಿನ ಸ್ಮರಣೆ ಮತ್ತು ಮಾರ್ಗದರ್ಶನ ನಮ್ಮನ್ನು ಸನ್ಮಾರ್ಗದಲ್ಲಿ ನಡೆಸುತ್ತದೆ. ಹೀಗಾಗಿ ಮನುಷ್ಯನ ಜೀವನದುದ್ದಕ್ಕೂ ಗುರುವಿನ ಅನುಗ್ರಹ ಬೇಕೇ ಬೇಕು ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.

 

 

 

Follow Us