ಅಪಹೃತೆಯನ್ನು ರಕ್ಷಿಸಿ ಐದು ದಿನಗಳಾದರೂ ನ್ಯಾಯಾಧೀಶರ ಮುಂದೆ ಹೇಳಿಕೆ ಯಾಕೆ ದಾಖಲಿಸಿಕೊಂಡಿಲ್ಲ? ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: May 09, 2024 | 1:45 PM

ಪ್ರಕರಣ ನಿರ್ಮಾಪಕ-ನಿರ್ದೇಶಕ ಕುಮಾರಸ್ವಾಮಿ ಅಂತ ಡಿಕೆ ಶಿವಕುಮಾರ್ ಹೇಳೀರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೌದು ನಾನೇ ಪ್ರೊಡ್ಯೂಸರ್, ನಾನೇ ಡೈರೆಕ್ಟರ್ ಮತ್ತು ಕಥಾನಾಯಕನೂ ನಾನೇ ಎಂದು ಹೇಳಿ, ರವಿಚಂದ್ರನ್ ಅಭಿನಯದ ದೃಶ್ಯಂ ಚಿತ್ರದಲ್ಲಿನ ಕಥಾನಾಯಕನಂತೆ ನಾನು ಈ ಪ್ರಕರಣದ ಕಥಾನಾಯಕ ಎಂದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮತ್ತೊಮ್ಮೆ ಎಸ್ಐಟಿ ತನಿಖೆ (SIT investigation) ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದರು. ರೇವಣ್ಣ ಅವರನ್ನು ಬಂಧಿಸಿದ್ದು ಮಹಿಳೆಯೊಬ್ಬರನ್ನು ಅಪಹರಿಸಿರುವ ಪ್ರಕರಣದಲ್ಲಿ, ಅದರೆ ಆಕೆಯನ್ನು ಟ್ರೇಸ್ ಮಾಡಿ 5 ದಿನ ಕಳೆದರೂ ಯಾಕೆ ಇದುವರೆಗೆ ಆಕೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೇಳಿಕೆಯನ್ನು (statement) ದಾಖಲಿಸಿಕೊಂಡಿಲ್ಲ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು, ರೇವಣ್ಣರನ್ನು ಇನ್ನೂ ಕೆಲದಿನಗಳ ಕಾಲ ಜೈಲಲ್ಲಿ ಕೂಡಿಹಾಕಬೇಕೆನ್ನುವುದು ಸರ್ಕಾರದ ಉದ್ದೇಶವಾಗಿದೆ, ಅಪಹರಣ ಪ್ರಕರಣದಲ್ಲಿ ಸತ್ಯಾಂಶ ಹೊರಬರೋದು ಸರ್ಕಾರಕ್ಕೆ ಬೇಕಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಪ್ರಕರಣ ನಿರ್ಮಾಪಕ-ನಿರ್ದೇಶಕ ಕುಮಾರಸ್ವಾಮಿ ಅಂತ ಡಿಕೆ ಶಿವಕುಮಾರ್ ಹೇಳೀರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೌದು ನಾನೇ ಪ್ರೊಡ್ಯೂಸರ್, ನಾನೇ ಡೈರೆಕ್ಟರ್ ಮತ್ತು ಕಥಾನಾಯಕನೂ ನಾನೇ ಎಂದು ಹೇಳಿ, ರವಿಚಂದ್ರನ್ ಅಭಿನಯದ ದೃಶ್ಯಂ ಚಿತ್ರದಲ್ಲಿನ ಕಥಾನಾಯಕನಂತೆ ನಾನು ಈ ಪ್ರಕರಣದ ಕಥಾನಾಯಕ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ತಮಗೆ ಬೇಕಾಗುವ ರೀತಿಯಲ್ಲಿ ಹೇಳಿಕೆ ನೀಡಲು ಎಸ್ಐಟಿ ಅಧಿಕಾರಿಗಳು ರೇವಣ್ಣ ಮೇಲೆ ಒತ್ತಡ ಹೇರುತ್ತಿದ್ದಾರೆ: ಕುಮಾರಸ್ವಾಮಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.