AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್ ಪರ ಘೋಷಣೆ ಕೂಗಿದ ಪ್ರಕರಣವನ್ನು ರಾತ್ರೋರಾತ್ರಿ ಮುಚ್ಚಿ ಹಾಕಿದ್ಯಾಕೆ? ಡಿಕೆ ಶಿವಕುಮಾರ್

ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್ ಪರ ಘೋಷಣೆ ಕೂಗಿದ ಪ್ರಕರಣವನ್ನು ರಾತ್ರೋರಾತ್ರಿ ಮುಚ್ಚಿ ಹಾಕಿದ್ಯಾಕೆ? ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 06, 2024 | 10:05 AM

ಮಂಡ್ಯದ ಪ್ರಕರಣಕ್ಕೆ ಎಫ್ ಎಸ್ ಎಲ್ ವೆರಿಫಿಕೇಶನ್ ಬೇಕಿಲ್ಲ. ಯಾಕೆಂದರೆ, ಒಬ್ಬ ಕಾರ್ಯಕರ್ತ ಪಾಕಿಸ್ತಾನ್ ಜಿಂದಾಬಾದ್ ಅಂತ ಕೂಗಿದ ಬಳಿಕ ಅವನ ಹಿಂದೆ ನಿಂತಿದ್ದ ಮತ್ತೊಬ್ಬ ಕಾರ್ಯಕರ್ತ ಅವನ ಬಾಯಿ ಮುಚ್ಚುತ್ತಾನೆ ಎಂದು ಹೇಳಿದ ಶಿವಕುಮಾರ್ ಆ ಪ್ರಕರಣವನ್ನು ಆಗಿನ ಬಿಜೆಪಿ ಸರ್ಕಾರ ರಾತ್ರೋರಾತ್ರಿ ಮುಚ್ಚಿಹಾಕಿದ್ಯಾಕೆ ಎಂದು ಕೇಳಿದರು.

ಹುಬ್ಬಳ್ಳಿ: ಬೆಂಗಳೂರುನಿಂದ ಇಂದು ಬೆಳಗ್ಗೆ ಹುಬ್ಬಳ್ಳಿಗೆ ಆಗಮಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ, ವಿಧಾನ ಸೌಧದ ಒಳಗಡೆ ಪಾಕಿಸ್ತಾನ ಪರ ಘೋಷಣೆ (pro Pakistan slogan) ಕೂಗಿದ ಪ್ರಕರಣದ ಹಿನ್ನೆಲೆಯಲ್ಲಿ ತಾವು ರಾಜೀನಾಮೆ ನೀಡಬೇಕು ಎನ್ನುತ್ತಿರುವ ಬಿಜೆಪಿ ನಾಯಕರನ್ನು (BJP leaders) ತರಾಟೆಗೆ ತೆಗೆದುಕೊಂಡರು. ಅದ್ಯಾವ ನೈತಿಕತೆಯಿಂದ ಅವರು ರಾಜೀನಾಮೆ ಕೇಳುತ್ತಾರೆ? ದೇಶಭಕ್ತಿಯ ಬಗ್ಗೆ ಮಾತಾಡುವ ಬಿಜೆಪಿ ನಾಯಕರು ಮಂಡ್ಯದಲ್ಲಿ ತಮ್ಮ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಪ್ರಕರಣವನ್ನು ಯಾಕೆ ಮುಚ್ಚಿಹಾಕಿದರು? ನಾವಾದರೋ ವಿಧಾನ ಸೌಧದಲ್ಲಿ ಕೂಗಿದ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ಮಾಡಿಸುತ್ತಿದ್ದೇವೆ. ದೇಶದ ಬಗ್ಗೆ ನಮಗಿರುವ ಬದ್ಧತೆ ಅವರಿಗಿದೆಯಾ? ನಮ್ಮಲ್ಲಿರುವ ರಾಷ್ಟ್ರಭಕ್ತಿ ಅವರಲ್ಲಿದೆಯಾ? ಎಂದು ಶಿವಕುಮಾರ್ ಪ್ರಶ್ನಿಸಿದರು. ಮಂಡ್ಯದ ಪ್ರಕರಣಕ್ಕೆ ಎಫ್ ಎಸ್ ಎಲ್ ವೆರಿಫಿಕೇಶನ್ ಬೇಕಿಲ್ಲ. ಯಾಕೆಂದರೆ, ಒಬ್ಬ ಕಾರ್ಯಕರ್ತ ಪಾಕಿಸ್ತಾನ್ ಜಿಂದಾಬಾದ್ ಅಂತ ಕೂಗಿದ ಬಳಿಕ ಅವನ ಹಿಂದೆ ನಿಂತಿದ್ದ ಮತ್ತೊಬ್ಬ ಕಾರ್ಯಕರ್ತ ಅವನ ಬಾಯಿ ಮುಚ್ಚುತ್ತಾನೆ ಎಂದು ಹೇಳಿದ ಶಿವಕುಮಾರ್ ಆ ಪ್ರಕರಣವನ್ನು ಆಗಿನ ಬಿಜೆಪಿ ಸರ್ಕಾರ ರಾತ್ರೋರಾತ್ರಿ ಮುಚ್ಚಿಹಾಕಿದ್ಯಾಕೆ ಎಂದು ಕೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಏತ ನೀರಾವರಿ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಶಿವಕುಮಾರ್ ಇಂದು ನೆರವೇರಿಸಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಂಡ್ಯದಲ್ಲಿ ಒಂದೂವರೆ ವರ್ಷಗಳ ಹಿಂದೆ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತರ ಬಂಧನ