ಅತ್ಯಾಚಾರ ಎಸಗಿದ ಮುನಿರತ್ನನನ್ನು ಬಿಜೆಪಿ ಇನ್ನೂ ಯಾಕೆ ಪಕ್ಷದಲ್ಲಿ ಉಳಿಸಿಕೊಂಡಿದೆ? ಪ್ರಿಯಾಂಕ್ ಖರ್ಗೆ

ಅರುಣ್​ ಕುಮಾರ್​ ಬೆಳ್ಳಿ

Updated on: May 22, 2025 | 2:09 PM

ಮುನಿರತ್ನ ವಿರುದ್ಧ ಇರೋದು ಆರೋಪಗಳಲ್ಲ, ಅವರ ಎಸಗಿದ ಅಪರಾಧಗಳು ಪ್ರೂವ್ ಆಗಿವೆ, ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ, ಎಫ್​ಎಸ್​ಎಲ್ ರಿಪೋರ್ಟ್ ಬಂದಿದೆ, ಸಂಸ್ಕೃತಿ ಬಗ್ಗೆ ಅಷ್ಟೆಲ್ಲ ಮಾತಾಡುವ ಬಿಜೆಪಿ ನಾಯಕರು ಮುನಿರತ್ನರನ್ನು ಯಾಕೆ ಪಕ್ಷದಲ್ಲಿ ಉಳಿಸಿಕೊಂಡಿದ್ದಾರೆ ಅನ್ನೋದನ್ನು ಮೊದಲು ಹೇಳಲಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಬೆಂಗಳೂರು, ಮೇ 22: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರ ನೈತಿಕತೆ ಬಗ್ಗೆ ಪ್ರಶ್ನಿಸಿದರು. ಅವರು ಆರ್​ಅರ್​ ನಗರ ಶಾಸಕ ಮುನಿರತ್ನ (BJP MLA Munirathna) ಅವರನ್ನು ಇನ್ನೂ ಯಾಕೆ ಪಕ್ಷದಲ್ಲ ಇಟ್ಟುಕೊಂಡಿದ್ದಾರೆ? ಜಾತಿ ನಿಂದನೆ ಮಾಡಿದವನನ್ನು, ಸಾಮೂಹಿಕ ಅತ್ಯಾಚಾರದಲ್ಲಿ ಭಾಗಿ, ಅತ್ಯಾಚಾರ ಎಸಗಿದವನನ್ನು ಪಕ್ಷದಲ್ಲಿ ಇಟ್ಟುಕೊಂಡಿರುವುದಕ್ಕೆ ಕಾರಣವೇನು? ಯಾರು ಏನೇನು ಮಾಡಿದ್ದಾರೆ ಅಂತ ಕೂತು ಚರ್ಚೆ ಮಾಡೋಣ, ಬಿಜೆಪಿ ನಾಯಕರು ಚರ್ಚೆಗೆ ಬರಲಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಇದನ್ನೂ ಓದಿ:   ಹಿಂದೂಗಳು ಟಾರ್ಗೆಟ್ ಆಗಿದ್ದನ್ನು ಅಲ್ಲಗಳೆಯುವ ಪ್ರಿಯಾಂಕ್ ಖರ್ಗೆ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ: ಚಲವಾದಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.