ಶಿವಕುಮಾರ್ ವಿರುದ್ಧ ಆರೋಪ ಮಾಡೋದು ಬಿಟ್ಟು ತನ್ನ ವಿರುದ್ಧ ಮಾತಾಡುತ್ತಿರುವವರ ಮೇಲೆ ಮುನಿರತ್ನ ಕೇಸ್ ಹಾಕಲಿ: ಸೋಮಶೇಖರ್

Updated on: Mar 24, 2025 | 5:05 PM

ಎಂಟು ಸಲ ಶಾಸಕರಾಗಿ ಆಯ್ಕೆಯಾಗಿರುವ ಶಿವಕುಮಾರ್ ವಿರುದ್ಧ ಮುನಿರತ್ನ ಆರೋಪ ಮಾಡುತ್ತಿದ್ದಾರೆ, ಅನೆ ಹೋಗುತ್ತಿದ್ದರೆ ನಾಯಿ ಬೊಗಳುತ್ತಿರುತ್ತಂತೆ ಎಂದು ಹೇಳಿದ ಸೋಮಶೇಖರ್, ನಾಯರ್, ನಾರಾಯಣ ಸ್ವಾಮಿ ಮತ್ತು ಮಹಿಳೆ ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ಬಳಿಕ ಶಿವಕುಮಾರ್ ವಿರುದ್ಧ ಮಾತಾಡುವುದನ್ನು ಮುನಿರತ್ನ ನಿಲ್ಲಿಸಿದ್ದಾರೆ ಎಂದು ಹೇಳಿದರು.

ಬೆಂಗಳೂರು, 24 ಮಾರ್ಚ್:  ನಗರದಲ್ಲಿ ಇಂದು ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್, ಡಿಕೆ ಶಿವಕುಮಾರ್ ವಿರುದ್ಧ ಮುನಿರತ್ನ ಆರೋಪ ಮಾಡುತ್ತಿರೋದು ಅಲ್ಲ, ಅವರು ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ, ಆರ್ ಆರ್ ನಗರದ ವೇಲು ನಾಯರ್, ಲಗ್ಗೆರೆ ನಾರಾಯಣಸ್ವಾಮಿ ಮತ್ತೊಬ್ಬ ಮಹಿಳೆ ಮಾಡುತ್ತಿರುವ ಅರೋಪ ಈಗಿಂದಲ್ಲ, ಬಹಳ ದಿನಗಳಿಂದ ಮಾಡುತ್ತಿದ್ದಾರೆ, ವಿಧಾನ ಸೌಧದಲ್ಲೇ ತನ್ನ ಮೇಲೆ ಅತ್ಯಾಚಾರ ನಡೆಯಿತು ಅಂತ ಅ ಮಹಿಳೆ ಹೇಳುತ್ತಿದ್ದಾರೆ, ಮುನಿರತ್ನಗೆ ತಾಕತ್ತಿದ್ದರೆ ಮೊದಲು ಈ ಮೂವರ ಮೇಲೆ ಕೇಸ್ ಹಾಕಲಿ ಎಂದು ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರನ್ಯಾ ರಾವ್ ಪ್ರಕರಣದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಮಂತ್ರಿಗಳು ಯಾಕೆ ಭಾಗಿಯಾಗಿರಬಾರದು? ಎಸ್​ಟಿ ಸೋಮಶೇಖರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More