ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 40% ಕಮೀಶನ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರ ದಾಖಲೆ ಅಲ್ಲವೇ? ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Mar 13, 2023 | 4:52 PM

ಬಿಜೆಪಿ ಕಾರ್ಯಕರ್ತನಾಗಿದ್ದ ಸಂತೋಷ ಪಾಟೀಲ್ ಗ್ರಾಮೀಣಾಭಿವೃದ್ಧಿ ಇಲಾಖೆಗಾಗಿ ನಡೆಸಿದ ಕಾಮಗಾರಿಯ ಬಿಲ್ ಪಾಸ್ ಮಾಡಿಸಿಕೊಳ್ಳಲು 40 ಪರ್ಸೆಂಟ್ ಕಮೀಶನ್ ಕೊಡಲಾಗದೆ ಆತ್ಮಹತ್ಯೆ ಮಾಡಿಕೊಂಡರು ಎಂದು ಸಿದ್ದರಾಮಯ್ಯ ಹೇಳಿದರು.

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತೊಮ್ಮೆ ರಾಜ್ಯದ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮೀಶನ್ ಸರ್ಕಾರ ಅಂತ ಹೇಳಿದರು. ಪ್ರಜಾಧ್ವನಿಯಾತ್ರೆ ಭಾಗವಾಗಿ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತಾಡಿದ ಅವರು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಿಲ್ ಪಾಸು ಮಾಡಲು ಮಂತ್ರಿಗಳು 40 ಪರ್ಸೆಂಟ್ ಕಮೀಶನ್ ಕೇಳುತ್ತಾರೆ ಅಂತ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಪತ್ರ ಬರೆದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ದಾಖಲೆ ಕೊಡಿ ತನಿಖೆ ಮಾಡಿಸ್ತೀನಿ ಅನ್ನುತ್ತಾರೆ. ಪ್ರಧಾನಿಗಳಿಗೆ ಬರೆದ ಪತ್ರ ದಾಖಲೆಯಲ್ಲವೇ ಎಂದು ಸಿದ್ದರಾಮಯ್ಯ ಕೇಳಿದರು. ಬಿಜೆಪಿ ಕಾರ್ಯಕರ್ತನಾಗಿದ್ದ ಸಂತೋಷ ಪಾಟೀಲ್ ಗ್ರಾಮೀಣಾಭಿವೃದ್ಧಿ ಇಲಾಖೆಗಾಗಿ ನಡೆಸಿದ ಕಾಮಗಾರಿಯ ಬಿಲ್ ಪಾಸ್ ಮಾಡಿಸಿಕೊಳ್ಳಲು 40 ಪರ್ಸೆಂಟ್ ಕಮೀಶನ್ ಕೊಡಲಾಗದೆ ಆತ್ಮಹತ್ಯೆ ಮಾಡಿಕೊಂಡರು ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 13, 2023 04:52 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.