ಬಳ್ಳಾರಿಯಲ್ಲಿ ಪತ್ರಿಕಾ ಗೋಷ್ಟಿ ನಡೆಸುವಾಗ ಮಾಜಿ ಶಾಸಕ ಕೆಎಸ್ ಈಶ್ವರಪ್ಪನವರಿಗೆ ಸಿಟ್ಟು ಬಂದಿದ್ದು ಯಾಕೆ?

ಅವರ ದಾರ್ಷ್ಟ್ಯತೆಯ ಮಾತುಗಳಿಂದ ಸಿಟ್ಟಿಗೇಳುವ ಪತ್ರಕರ್ತರು ಪ್ರಶ್ನೆಗಳ ದಾಳಿಯನ್ನು ತೀವ್ರಗೊಳಿಸಿದಾಗ ಈಶ್ವರಪ್ಪ ಗೋಷ್ಟಿಯನ್ನು ನಿಲ್ಲಿಸಿ ಎದ್ದು ಹೋಗುವ ಬೆದರಿಕೆಯನ್ನೂ ಹಾಕುತ್ತಾರೆ. ಆದರೆ, ತನ್ನ ಬೆದರಿಕೆಗೆ ಬಳ್ಳಾರಿ ಪತ್ರಕರ್ತರು ಮಣಿಯಲಾರರು ಅಂತ ಮನವರಿಕೆಯಾದಾಗ, ಮೆತ್ತಗಾಗಿ ಸಂಯಮದಿಂದ ಮಾತಾಡುತ್ತಾರೆ.

ಬಳ್ಳಾರಿಯಲ್ಲಿ ಪತ್ರಿಕಾ ಗೋಷ್ಟಿ ನಡೆಸುವಾಗ ಮಾಜಿ ಶಾಸಕ ಕೆಎಸ್ ಈಶ್ವರಪ್ಪನವರಿಗೆ ಸಿಟ್ಟು ಬಂದಿದ್ದು ಯಾಕೆ?
| Edited By: Arun Kumar Belly

Updated on:Nov 06, 2023 | 6:49 PM

ಬಳ್ಳಾರಿ: ಇದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪನವರ (KS Eshwarappa) ಪ್ರವೃತ್ತಿ ಮಾತ್ರ ಅಲ್ಲ ಬಹುತೇಕ ಎಲ್ಲ ರಾಜಕಾರಣಿಗಳ ಪ್ರವೃತ್ತಿ ಇದೇ ತೆರನಾಗಿರುತ್ತದೆ. ಪತ್ರಿಕಾ ಗೋಷ್ಟಿ (press conference) ನಡೆಸುವಾಗ ನಮ್ಮ ನಾಯಕರಿಗೆ ಸುಲಭವಾದ ಪ್ರಶ್ನೆಗಳು ಬೇಕು ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಶ್ನೆ ಕೇಳಿದರೆ ಕೆಂಡಾಮಂಡಲರಾಗುತ್ತಾರೆ. ಬಳ್ಳಾರಿ ಪ್ರವಾಸದಲ್ಲಿರುವ ಮಾಜಿ ಶಾಸಕ ಈಶ್ವರಪ್ಪ ಬಳ್ಳಾರಿಯ ಪತ್ರಕರ್ತರು (Ballari media persons) ಕೇಳಿದ ಪ್ರಶ್ನೆಗಳನ್ನು ತೆಗೆದುಕೊಳ್ಳಲಾಗದೆ ಕೂಗಾಡಲಾರಂಭಿಸಿದರು. ಒಬ್ಬ ಪತ್ರಕರ್ತ ಮಾತ್ರ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಶ್ನೆ ಕೇಳಿದ್ದರೆ ಅವರು ಪ್ರಾಯಶಃ ನಿಭಾಯಿಸುತ್ತಿದ್ದರು ಇಲ್ಲವೇ ಪತ್ರಕರ್ತನ ಬಾಯಿ ಮುಚ್ಚಿಸುವ ಪ್ರಯತ್ನ ಮಾಡುತ್ತಿದ್ದರು. ಆದರೆ ಗಮನಾರ್ಹ ಸಂಗತಿಯೆಂದರೆ ಅವರ ಪತ್ರಿಕಾ ಗೋಷ್ಟಿಯಲ್ಲಿದ್ದ ಮಾಧ್ಯಮ ಪ್ರತಿನಿಧಿಗಳೆಲ್ಲ ಅವರ ಮೇಲೆ ಮುಗಿಬಿದ್ದರು, ಅಂದರೆ ಅವರಿಗೆ ಉತ್ತರಿಸಲು ಕಷ್ಟವಾಗುವ ಪ್ರಶ್ನೆಗಳನ್ನು ಕೇಳಿದರು. ಆವರ ದಾಳಿಯಿಂದ ತಾಳ್ಮೆ ಕಳೆದುಕೊಳ್ಳುವ ಈಶ್ವರಪ್ಪ ಪತ್ರಿಕಾ ಗೋಷ್ಟಿ ಕರೆದವನು ಆಡಬಾರದ ಮಾತನ್ನಾಡುತ್ತಾರೆ. ‘ನೀವು ಕೇಳಿದಕ್ಕೆಲ್ಲ ಉತ್ತರ ಕೊಡೋದಿಕ್ಕೆ ನಾನು ಬಂದಿಲ್ಲ, ನನು ಹೇಳೋದನ್ನಷ್ಟೇ ನೀವು ಕೇಳಿಸಿಕೊಳ್ಳಬೇಕು!’ ಅನ್ನುತ್ತಾರೆ. ಅವರ ದಾರ್ಷ್ಟ್ಯತೆಯ ಮಾತುಗಳಿಂದ ಸಿಟ್ಟಿಗೇಳುವ ಪತ್ರಕರ್ತರು ಪ್ರಶ್ನೆಗಳ ದಾಳಿಯನ್ನು ತೀವ್ರಗೊಳಿಸಿದಾಗ ಈಶ್ವರಪ್ಪ ಗೋಷ್ಟಿಯನ್ನು ನಿಲ್ಲಿಸಿ ಎದ್ದು ಹೋಗುವ ಬೆದರಿಕೆಯನ್ನೂ ಹಾಕುತ್ತಾರೆ. ಆದರೆ, ತನ್ನ ಬೆದರಿಕೆಗೆ ಬಳ್ಳಾರಿ ಪತ್ರಕರ್ತರು ಮಣಿಯಲಾರರು ಅಂತ ಮನವರಿಕೆಯಾದಾಗ, ಮೆತ್ತಗಾಗಿ ಸಂಯಮದಿಂದ ಮಾತಾಡುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:47 pm, Mon, 6 November 23

Follow us
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ