AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್‌ ನೆಟ್ಟಾರ್‌ ಕೊಲೆ ಆರೋಪಿಗಳ ಎನ್​ಕೌಂಟರ್​ಗೆ ಯಾಕೆ ಆದೇಶಿಸಿಲ್ಲ: ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ನಡೆಸಿರುವ ವಾಗ್ದಾಳಿಯ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಕರ್ನಾಟಕಕ್ಕೆ ಒಬ್ಬರು ಯೋಗಿ ಬೇಕೇ ಹೊರತು ಜಾತಿವಾದಿ ನಾಯಕರಲ್ಲ ಎಂದು ಅವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಪ್ರತಾಪ್ ಭಾಷಣದ ಪೂರ್ಣ ವಿಡಿಯೋ ಇಲ್ಲಿದೆ.

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Sep 06, 2024 | 12:36 PM

Share

ಮಂಗಳೂರು, ಸೆಪ್ಟೆಂಬರ್ 6: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ, ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಆರೋಪಿಗಳ ಎನ್​ಕೌಂಟರ್​​ಗೆ ಆದೇಶಿಸಲು ಅವಕಾಶ ಇತ್ತು. ಆದರೂ ಯಾಕೆ ಮಾಡಿಲ್ಲ ಎಂದು ಬಿಜೆಪಿ ನಾಯಕ ಪ್ರತಾಪ್ ಸಿಂಹ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧವೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರತಾಪ್‌ ಸಿಂಹ ನೀಡಿದ ಹೇಳಿಕೆಯ ವಿಡಿಯೋ ಈಗ ವೈರಲ್‌ ಆಗುತ್ತಿದೆ.

ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ಹೋಗಿ ಬಾವುಟ, ಕರಪತ್ರ ಹಂಚಿ ಸರ್ಕಾರ ತಂದಿರಿ. ಪೊಲೀಸ್ ಇಲಾಖೆಯು ರಾಜಕಾರಣಿಗಳು ಎಂಬ ದುಷ್ಟ ವ್ಯವಸ್ಥೆಯಡಿ ಸಿಲುಕಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಯಿತು. ಕೊಲೆ ಮಾಡಿದವರು ಎಲ್ಲಿ ಇದ್ದಾರೆ ಎಂದು ಪೊಲೀಸರಿಗೆ ಗೊತ್ತಿತ್ತು. ಪೋಲೀಸರ ಕೈಯಲ್ಲಿ ಬಂದೂಕು ಇತ್ತು, ಟ್ರಿಗರ್ ಎಳೆಯಲು ಬೆರಳು ಇತ್ತು. ಆದರೆ ಟ್ರಿಗರ್ ಎಳೆಯಬೇಡಿ ಎಂದು ಬಿಜೆಪಿ ಸರಕಾರಕ್ಕೆ ಆರ್ಡರ್ ಮಾಡಿದವರು ಯಾರು? ಅವತ್ತು ಬಿಜೆಪಿ ಸರಕಾರ ಆರ್ಡರ್ ಕೊಟ್ಟಿದ್ರೆ ದುರುಳರು ಇವತ್ತು ಸತ್ತಿರುತ್ತಿದ್ದರು. ಶಿವಮೊಗ್ಗ ಹರ್ಷ ಮರ್ಡರ್ ಕೇಸ್​​ ಆರೋಪಿಗಳು ಒಂದು ಮನೆಯಲ್ಲಿದ್ದರು. ಅವರನ್ನ ಎನ್ಕೌಂಟರ್ ಮಾಡಿಸಲು ಏನ್ ತೊಂದರೆ ಇತ್ತು? ಕರ್ನಾಟಕಕ್ಕೆ ಒಬ್ಬ ಯೋಗಿ ಆದಿತ್ಯನಾಥ್ ಬೇಕೇ ಹೊರತು ಜಾತಿವಾದಿ ನಾಯಕರಲ್ಲ. ಹಿಂದುಗಳನ್ನ ಒಟ್ಟಿಗೆ ತೆಗೆದುಕೊಂಡು ಹೋಗುವ ನಾಯಕರು ಬೇಕು ಎಂದು ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More