ಕೊಲೆ ಕೇಸ್​ನಲ್ಲೂ ದರ್ಶನ್​ಗೆ ಫ್ಯಾನ್ಸ್​ ಬೆಂಬಲ ನೀಡೋದು ಯಾಕೆ? ಉತ್ತರಿಸಿದ ಉಮಾಶ್ರೀ

|

Updated on: Jun 12, 2024 | 8:42 PM

ಕನ್ನಡ ಚಿತ್ರರಂಗದ ಹಿರಿಯ ನಟಿ ಉಮಾಶ್ರೀ ಅವರು ದರ್ಶನ್​ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಕೊಲೆ ಆರೋಪ ಇದ್ದರೂ ಕೂಡ ಅನೇಕರು ದರ್ಶನ್​ಗೆ ಬೆಂಬಲ ನೀಡುತ್ತಿದ್ದಾರೆ. ಅಂಥ ಮನಸ್ಥಿತಿ ಯಾಕೆ ಎಂಬ ಪ್ರಶ್ನೆಗೆ ಉಮಾಶ್ರೀ ಉತ್ತರಿಸಿದ್ದಾರೆ. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್​ ಸೇರಿ ಒಟ್ಟು 17 ಜನರ ಮೇಲೆ ಕೇಸ್​ ದಾಖಲಾಗಿದೆ. ತನಿಖೆ ನಡೆಯುತ್ತಿದೆ.

ಕೊಲೆ ಆರೋಪದಲ್ಲಿ ನಟ ದರ್ಶನ್​ (Darshan) ಅರೆಸ್ಟ್​ ಆಗಿದ್ದು ಅನೇಕರಿಗೆ ಅಚ್ಚರಿ ಆಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬುವವರ ಹತ್ಯೆಯಲ್ಲಿ ದರ್ಶನ್​ ಮತ್ತು ಸಹಚರರ ಕೈವಾಡ ಇದೆ ಎಂಬ ಆಯಾಮದಲ್ಲಿ ತನಿಖೆ ನಡೆಯುತ್ತಿದೆ. ದರ್ಶನ್​ ಮೇಲೆ ಇಂಥ ಗಂಭೀರ ಆರೋಪ ಕೇಳಿಬಂದಿದ್ದರೂ ಕೂಡ ಅನೇಕ ಅಭಿಮಾನಿಗಳು ನಟನಿಗೆ ಬೆಂಬಲ ಸೂಚಿಸುತ್ತಿದ್ದಾರೆ. ದರ್ಶನ್​ ಪರವಾಗಿ ಕೆಲವು ಫ್ಯಾನ್ಸ್ ಕಮೆಂಟ್​ ಮಾಡುತ್ತಿದ್ದಾರೆ. ಅಂಥವರ ಮನಸ್ಥಿತಿ ಬಗ್ಗೆ ನಟಿ ಉಮಾಶ್ರೀ (Umashree) ಮಾತನಾಡಿದ್ದಾರೆ. ‘ಎಲ್ಲರಿಗೂ ಒಂದು ನಂಬಿಕೆ ಎನ್ನುವುದು ಇರುತ್ತದೆ. ನಾವು ಆರಾಧಿಸುವ, ಪೂಜಿಸುವ ವ್ಯಕ್ತಿಗಳ ಬಗ್ಗೆ ಆ ನಂಬಿಕೆ ಯಾವಾಗಲೂ ಇರುತ್ತೆ. ಜೊತೆಯಲ್ಲಿ ಕೆಲಸ ಮಾಡಿದ ನಮಗೂ ಹಾಗೆ ಅನಿಸುತ್ತದೆ. ನಾನು ಕೂಡ ಈಗ ಹಾಗೇ ಹೇಳಿದೆ. ತುಂಬ ಒಳ್ಳೆಯ ಹುಡುಗ, ಯಾಕೆ ಹೀಗೆ ಆಯ್ತೋ ಗೊತ್ತಿಲ್ಲ ಅಂತ. ಆ ನಂಬಿಕೆಯಿಂದಲೇ ಎಲ್ಲರೂ ಆ ರೀತಿ ಪ್ರತಿಕ್ರಿಯೆ ನೀಡುತ್ತಾರೆ. ಅದು ತಪ್ಪು ಅಂತ ನಾವಾಗಲೀ, ನೀವಾಗಲೀ ಹೇಳೋಕೆ ಆಗಲ್ಲ’ ಎಂದಿದ್ದಾರೆ ಉಮಾಶ್ರೀ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on