ಕೊಲೆ ಆರೋಪದಲ್ಲಿ ನಟ ದರ್ಶನ್ (Darshan) ಅರೆಸ್ಟ್ ಆಗಿದ್ದು ಅನೇಕರಿಗೆ ಅಚ್ಚರಿ ಆಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಎಂಬುವವರ ಹತ್ಯೆಯಲ್ಲಿ ದರ್ಶನ್ ಮತ್ತು ಸಹಚರರ ಕೈವಾಡ ಇದೆ ಎಂಬ ಆಯಾಮದಲ್ಲಿ ತನಿಖೆ ನಡೆಯುತ್ತಿದೆ. ದರ್ಶನ್ ಮೇಲೆ ಇಂಥ ಗಂಭೀರ ಆರೋಪ ಕೇಳಿಬಂದಿದ್ದರೂ ಕೂಡ ಅನೇಕ ಅಭಿಮಾನಿಗಳು ನಟನಿಗೆ ಬೆಂಬಲ ಸೂಚಿಸುತ್ತಿದ್ದಾರೆ. ದರ್ಶನ್ ಪರವಾಗಿ ಕೆಲವು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ಅಂಥವರ ಮನಸ್ಥಿತಿ ಬಗ್ಗೆ ನಟಿ ಉಮಾಶ್ರೀ (Umashree) ಮಾತನಾಡಿದ್ದಾರೆ. ‘ಎಲ್ಲರಿಗೂ ಒಂದು ನಂಬಿಕೆ ಎನ್ನುವುದು ಇರುತ್ತದೆ. ನಾವು ಆರಾಧಿಸುವ, ಪೂಜಿಸುವ ವ್ಯಕ್ತಿಗಳ ಬಗ್ಗೆ ಆ ನಂಬಿಕೆ ಯಾವಾಗಲೂ ಇರುತ್ತೆ. ಜೊತೆಯಲ್ಲಿ ಕೆಲಸ ಮಾಡಿದ ನಮಗೂ ಹಾಗೆ ಅನಿಸುತ್ತದೆ. ನಾನು ಕೂಡ ಈಗ ಹಾಗೇ ಹೇಳಿದೆ. ತುಂಬ ಒಳ್ಳೆಯ ಹುಡುಗ, ಯಾಕೆ ಹೀಗೆ ಆಯ್ತೋ ಗೊತ್ತಿಲ್ಲ ಅಂತ. ಆ ನಂಬಿಕೆಯಿಂದಲೇ ಎಲ್ಲರೂ ಆ ರೀತಿ ಪ್ರತಿಕ್ರಿಯೆ ನೀಡುತ್ತಾರೆ. ಅದು ತಪ್ಪು ಅಂತ ನಾವಾಗಲೀ, ನೀವಾಗಲೀ ಹೇಳೋಕೆ ಆಗಲ್ಲ’ ಎಂದಿದ್ದಾರೆ ಉಮಾಶ್ರೀ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.