AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?

Daily Devotional: ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?

ಭಾವನಾ ಹೆಗಡೆ
|

Updated on: May 31, 2026 | 6:45 AM

Share

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸಾಯುವ ಮುನ್ನ ಕೊನೇ ಗಳಿಗೆಯಲ್ಲಿಗಂಗಾಜಲವನ್ನ ಬಿಡುವುದು ಯಾಕೆ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಿಂದೂ ಸನಾತನ ಸಂಪ್ರದಾಯದಲ್ಲಿ, ಒಬ್ಬ ವ್ಯಕ್ತಿಯು ತನ್ನ ಅಂತಿಮ ಘಟ್ಟದಲ್ಲಿದ್ದಾಗ, ದೇಹಕ್ಕೆ ತುಳಸಿ ಮತ್ತು ಗಂಗಾಜಲವನ್ನು ಅರ್ಪಿಸುವ ಪ್ರಾಚೀನ ಪದ್ಧತಿಯಿದೆ. ಈ ಸಂಪ್ರದಾಯವು ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ತುಳಸಿಯನ್ನು ವಿಷ್ಣುಪ್ರಿಯೆ ಎಂದು ಪರಿಗಣಿಸಲಾಗುತ್ತದೆ, ಇದು ಪವಿತ್ರತೆ ಮತ್ತು ವಿಷ್ಣುವಿನ ಪ್ರೀತಿಯ ಸಂಕೇತವಾಗಿದೆ. ಗಂಗಾಜಲವನ್ನು ಪಾಪನಾಶಕ ಮತ್ತು ಕರ್ಮನಾಶಕ ಎಂದು ನಂಬಲಾಗುತ್ತದೆ.

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸಾಯುವ ಮುನ್ನ ಕೊನೇ ಗಳಿಗೆಯಲ್ಲಿಗಂಗಾಜಲವನ್ನ ಬಿಡುವುದು ಯಾಕೆ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಿಂದೂ ಸನಾತನ ಸಂಪ್ರದಾಯದಲ್ಲಿ, ಒಬ್ಬ ವ್ಯಕ್ತಿಯು ತನ್ನ ಅಂತಿಮ ಘಟ್ಟದಲ್ಲಿದ್ದಾಗ, ದೇಹಕ್ಕೆ ತುಳಸಿ ಮತ್ತು ಗಂಗಾಜಲವನ್ನು ಅರ್ಪಿಸುವ ಪ್ರಾಚೀನ ಪದ್ಧತಿಯಿದೆ. ಈ ಸಂಪ್ರದಾಯವು ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ತುಳಸಿಯನ್ನು ವಿಷ್ಣುಪ್ರಿಯೆ ಎಂದು ಪರಿಗಣಿಸಲಾಗುತ್ತದೆ, ಇದು ಪವಿತ್ರತೆ ಮತ್ತು ವಿಷ್ಣುವಿನ ಪ್ರೀತಿಯ ಸಂಕೇತವಾಗಿದೆ. ಗಂಗಾಜಲವನ್ನು ಪಾಪನಾಶಕ ಮತ್ತು ಕರ್ಮನಾಶಕ ಎಂದು ನಂಬಲಾಗುತ್ತದೆ.

ದೇಹವು ಅಸಹನೀಯ ನೋವಿನಿಂದ ಬಳಲುತ್ತಿರುವಾಗ, ಪ್ರಜ್ಞಾರಹಿತವಾಗಿದ್ದಾಗ ಅಥವಾ ದೇಹಕ್ಕೆ ಯಾವುದೇ ಆಹಾರ ಸೇರದಿದ್ದಾಗ, ಗಂಗಾಜಲವನ್ನು ಮೂರು ಬಾರಿ ಅರ್ಪಿಸಿ ತುಳಸಿಯನ್ನು ನೀಡಲಾಗುತ್ತದೆ. ಈ ಕ್ರಿಯೆಯು ದೇಹದಲ್ಲಿ ಅಂಟಿಕೊಂಡಿರುವ ಪಾಪಗಳು ಮತ್ತು ಕರ್ಮಗಳಿಂದ ಆತ್ಮಕ್ಕೆ ಬಿಡುಗಡೆ ನೀಡುತ್ತದೆ ಎಂದು ನಂಬಲಾಗಿದೆ. ಇದು ದೇಹದ ಶುದ್ಧೀಕರಣಕ್ಕೆ ಸಹಾಯ ಮಾಡಿ, ಆತ್ಮಕ್ಕೆ ಮೋಕ್ಷವನ್ನು ಪಡೆಯಲು ಮತ್ತು ಮುಂದಿನ ಪ್ರಯಾಣಕ್ಕೆ ಸುಗಮ ಮಾರ್ಗವನ್ನು ಒದಗಿಸುತ್ತದೆ. ಗರುಡ ಪುರಾಣದಲ್ಲಿ ಈ ಆಚರಣೆಯ ಕುರಿತು ಉಲ್ಲೇಖವಿದೆ ಎಂದು ಗುರೂಜಿ ತಿಳಿಸಿದ್ದಾರೆ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More