Daily Devotional: ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!

Updated on: Jun 03, 2026 | 6:46 AM

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಮರಗಳು ನಮಗೆ ಉಸಿರಾಡಲು, ಆಯುಷ್ಯ ವೃದ್ಧಿಸಲು ಸಹಕರಿಸುತ್ತವೆ. ಆದರೆ, ಕೆಲವು ನಿರ್ದಿಷ್ಟ ವೃಕ್ಷಗಳು ಮನೆಯ ಗೋಡೆ, ಕಾಂಪೌಂಡ್ ಅಥವಾ ಚಾವಣಿಯ ಮೇಲೆ ಬೆಳೆದಾಗ ಅದು ಶುಭವೋ ಅಶುಭವೋ ಎಂಬ ಪ್ರಶ್ನೆ ಮೂಡುತ್ತದೆ. ಧರ್ಮಶಾಸ್ತ್ರ ಮತ್ತು ವಾಸ್ತು ಪ್ರಕಾರ, ಈ ರೀತಿಯಾಗಿ ಬೆಳೆಯುವ ಅಶ್ವತ್ಥ (ಅರಳಿ), ಬೇವಿನ ಮತ್ತು ನಿಂಬೆ ಮರಗಳು ಅಷ್ಟು ಶುಭಸೂಚಕವಲ್ಲ.

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಮರಗಳು ನಮಗೆ ಉಸಿರಾಡಲು, ಆಯುಷ್ಯ ವೃದ್ಧಿಸಲು ಸಹಕರಿಸುತ್ತವೆ. ಆದರೆ, ಕೆಲವು ನಿರ್ದಿಷ್ಟ ವೃಕ್ಷಗಳು ಮನೆಯ ಗೋಡೆ, ಕಾಂಪೌಂಡ್ ಅಥವಾ ಚಾವಣಿಯ ಮೇಲೆ ಬೆಳೆದಾಗ ಅದು ಶುಭವೋ ಅಶುಭವೋ ಎಂಬ ಪ್ರಶ್ನೆ ಮೂಡುತ್ತದೆ. ಧರ್ಮಶಾಸ್ತ್ರ ಮತ್ತು ವಾಸ್ತು ಪ್ರಕಾರ, ಈ ರೀತಿಯಾಗಿ ಬೆಳೆಯುವ ಅಶ್ವತ್ಥ (ಅರಳಿ), ಬೇವಿನ ಮತ್ತು ನಿಂಬೆ ಮರಗಳು ಅಷ್ಟು ಶುಭಸೂಚಕವಲ್ಲ.

ವಿಶೇಷವಾಗಿ ಅಶ್ವತ್ಥ ವೃಕ್ಷವು ಮನೆಯ ಗೋಡೆ ಅಥವಾ ಚಾವಣಿಯ ಮೇಲೆ ತಾನಾಗಿಯೇ ಬೆಳೆದರೆ, ಇದನ್ನು ಶುಭಕರವೆಂದು ಪರಿಗಣಿಸಲಾಗುವುದಿಲ್ಲ. ಏಕೆಂದರೆ, ಇಂತಹ ವೃಕ್ಷಗಳಿಗೆ ದೇವರ ಲಹರಿಗಳು ಆವಾಹನೆ ಆಗುವ ಸಾಧ್ಯತೆ ಇರುತ್ತದೆ. ಸಂಸಾರಿಗಳಾದ ನಾವು ಆ ಶಕ್ತಿಯನ್ನು ತಡೆದುಕೊಳ್ಳಲು ಸದಾ ಪೂಜೆ, ಶುದ್ಧತೆ ಕಾಯ್ದುಕೊಳ್ಳುವುದು ಕಷ್ಟಸಾಧ್ಯ. ಇದರಿಂದ ಮನೆಯಲ್ಲಿ ಹಣದ ಒಳಹರಿವಿಗೆ ಅಡ್ಡಿ, ಕೆಲಸಕಾರ್ಯಗಳಲ್ಲಿ ಸ್ಥಗಿತ, ಆರೋಗ್ಯ ಸಮಸ್ಯೆಗಳು ಮತ್ತು ಮನಸ್ಸಿನ ಭಾವನೆಗಳಲ್ಲಿ ನೆಮ್ಮದಿ ಇರುವುದಿಲ್ಲ ಎಂದು ಗುರೂಜಿ ತಿಳಿಸಿದ್ದಾರೆ.

 

 

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More