AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?

ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?

ಕಿರಣ್ ಹನುಮಂತ್​ ಮಾದಾರ್
|

Updated on:Sep 11, 2024 | 3:35 PM

ಕೋಡಿಶ್ರೀ ಭವಿಷ್ಯದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಗರಂ ಆಗಿದ್ದು, ‘ಅದೇಲ್ಲ ನಗಣ್ಯ, ಮುಡಾ ಹಗರಣ ಬಗ್ಗೆ ಸುಳ್ಳು ದಾಖಲೆ ಕೊಟ್ಟು ಬಿಜೆಪಿಯವರು ಏನೋ ಮಾಡುತ್ತಿದ್ದಾರೆ. ಇಂತಹ ಸಂಧರ್ಭದಲ್ಲಿ ನಾವೆಲ್ಲ ಸಿದ್ದರಾಮಯ್ಯ ಬೆನ್ನಿಗೆ ಗಟ್ಟಿಯಾಗಿ ನಿಲ್ಲಬೇಕಿದೆ. ಇದೆಲ್ಲ ಬಾಲಿಷ ಅನಿಸುತ್ತದೆ. ಈ ವಿಚಾರವಾಗಿ ನಾನು ಏನೂ ಮಾತನಾಡಲು ಬಯಸಲ್ಲ.

ಬೆಳಗಾವಿ, ಸೆ.11: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್​ನಲ್ಲಿ ಚರ್ಚೆ ವಿಚಾರಕ್ಕೆ ಸಂಬಂಧಿಸಿ ಮಹಿಳಾ ಸಿಎಂ ಬಗ್ಗೆ ಕೋಡಿಮಠದ ಶ್ರೀಗಳ ಹೇಳಿಕೆ ವೈರಲ್ ಆಗಿದೆ. ಈ ಕುರಿತು ಮಾತನಾಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಗರಂ ಆಗಿದ್ದು, ‘ ಅದೇಲ್ಲ ನಗಣ್ಯ, ಮುಡಾ ಹಗರಣ ಬಗ್ಗೆ ಸುಳ್ಳು ದಾಖಲೆ ಕೊಟ್ಟು ಬಿಜೆಪಿಯವರು ಏನೋ ಮಾಡುತ್ತಿದ್ದಾರೆ. ಇಂತಹ ಸಂಧರ್ಭದಲ್ಲಿ ನಾವೆಲ್ಲ ಸಿದ್ದರಾಮಯ್ಯ ಬೆನ್ನಿಗೆ ಗಟ್ಟಿಯಾಗಿ ನಿಲ್ಲಬೇಕಿದೆ. ಇದೆಲ್ಲ ಬಾಲಿಷ ಅನಿಸುತ್ತದೆ. ಈ ವಿಚಾರವಾಗಿ ನಾನು ಏನೂ ಮಾತನಾಡಲು ಬಯಸಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೇಳುತ್ತೀನಿ. ಪಕ್ಷದಲ್ಲಿ ಹೈಕಮಾಂಡ್, ಶಾಸಕಾಂಗ ಎಂದು ಇದೆ. ಆದರೆ, ಇಂತಹ ವಿಚಾರವನ್ನು ಅಲ್ಲಿ, ಇಲ್ಲಿ ಗಲ್ಲಿಯಲ್ಲಿ ಮಾತನಾಡುವ ವಿಚಾರ ಅಲ್ಲ. ಧೀಮಂತ ನಾಯಕತ್ವ ನಮ್ಮ ಪಕ್ಷಕ್ಕೆ ಇದೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಗಟ್ಟಿಯಾಗಿ ಇರುತ್ತಾರೆ. ಸಿದ್ದರಾಮಯ್ಯ ಎಲ್ಲಿಯವರೆಗೆ ಗಟ್ಟಿಯಾಗಿ ಇರ್ತಾರೆ ಅಲ್ಲಿಯವರೆಗೆ ಅವರೇ ಸಿಎಂ. ಅಲ್ಲಿ ಇಲ್ಲಿ ಗಲ್ಲಿ, ಹಾದಿ ಬೀದಿಯಲ್ಲಿ ಮಾತನಾಡುವ ವಿಷಯ ಅಲ್ಲ. ಸಿದ್ದರಾಮಯ್ಯ ಎಲ್ಲಿಯ ವರೆಗೆ ಇರ್ತಿನಿ ಅಂತಾರೆ ಅಲ್ಲಿಯವರೆಗೆ ನಮ್ಮ ಬೆಂಬಲ ಅವರಿಗೆ ಇದೆ ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 11, 2024 03:08 PM