ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ? ಸಿಕ್ಕಿತು ಉತ್ತರ

Updated on: Oct 08, 2024 | 10:23 AM

‘ಬಿಗ್ ಬಾಸ್’ ಅನ್ನೋದು ಬೇರೆಯದೇ ಲೋಕ. ಇಲ್ಲಿ ಹೊರಗಿನ ವಿಚಾರಗಳನ್ನು ಎಳೆದು ತರಬಾರದು. ಈಗ ಬಿಗ್ ಬಾಸ್ ಮನೆಯಲ್ಲಿ ದರ್ಶನ್ ವಿಚಾರ ಏಕೆ ಚರ್ಚೆಗೆ ಬಂದಿಲ್ಲ ಎಂಬುದಕ್ಕ ಉತ್ತರ ಸಿಕ್ಕಿದೆ. ಯಮುನಾ ಅವರು ಈ ಬಗ್ಗೆ ಮಾತನಾಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಆರಂಭ ಆಗಿದ್ದು ನಟಿ ಯಮುನಾ ಶ್ರೀನಿಧಿ ಮೊದಲ ವಾರವರೇ ಎಲಿಮಿನೇಟ್ ಆಗಿದ್ದಾರೆ. ಅವರು ಹೊರ ಬಂದ ಬಳಿಕ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಅವರು ದರ್ಶನ್ ಅಭಿಮಾನಿ. ಬಿಗ್ ಬಾಸ್ ಸೇರಿದವರಲ್ಲಿ ಇನ್ನೂ  ಕೆಲ ದರ್ಶನ್ ಫ್ಯಾನ್ಸ್ ಇದ್ದಾರೆ. ಆದರೆ, ಯಾರೊಬ್ಬರೂ ದರ್ಶನ್ ವಿಚಾರ ಮಾತನಾಡಲಿಲ್ಲ. ಹೀಗೇಕೆ ಎನ್ನುವ ಪ್ರಶ್ನೆಗೆ ಯಮುನಾ ಶ್ರೀನಿಧಿ ಅವರು ಉತ್ತರಿಸಿದ್ದಾರೆ. ‘ಹೊರಗಿನ ಯಾವ ವಿಚಾರಗಳನ್ನು ನಾವು ಒಳಗೆ ಮಾತನಾಡುವಂತೆ ಇರಲಿಲ್ಲ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More