AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪು ಮಾಡಿರದಿದ್ದರೆ ಡಿಕೆ ಶಿವಕುಮಾರ್​ರನ್ನು ಟಾರ್ಗೆಟ್ ಯಾಕೆ ಮಾಡುತ್ತಾರೆ? ಹೆಚ್ ಡಿ ಕುಮಾರಸ್ವಾಮಿ

ತಪ್ಪು ಮಾಡಿರದಿದ್ದರೆ ಡಿಕೆ ಶಿವಕುಮಾರ್​ರನ್ನು ಟಾರ್ಗೆಟ್ ಯಾಕೆ ಮಾಡುತ್ತಾರೆ? ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 19, 2023 | 2:06 PM

Share

ನಮ್ಮ ದೇಶದ ಕಾನೂನು ವ್ಯವಸ್ಥೆಯಲ್ಲಿ ಹಲವಾರು ಸಂಸ್ಥೆಗಳಿವೆ ಮತ್ತು ಅವು ತಮ್ಮ ಕೆಲಸಗಳನ್ನು ಸಮರ್ಪಕ ಮತ್ತು ನಿಯಮಿತವಾಗಿ ಮಾಡುತ್ತಿರುತ್ತವೆ ಎಂದ ಕುಮಾರಸ್ವಾಮಿ, ಪದೇಪದೇ ತನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಶಿವಕುಮಾರ್ ಹೇಳೋದ್ಯಾಕೆ? ತಪ್ಪು ಮಾಡಿಲ್ಲದವರನ್ನು ಟಾರ್ಗೆಟ್ ಮಾಡುತ್ತಾರೆಯೇ? ಎಂದರು.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸದಂತೆ ನಿರ್ದೇಶನ ಕೋರಿ ಹೈಕೋರ್ಟ್ ಮೆಟ್ಟಲೇರಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಿನ್ನಡೆಯಾಗಿದ್ದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರಿಗೆ (HD Kumaraswamy) ಸಂತಸವುಂಟಾಗಿದೆಯಾದರೂ ಮಾಧ್ಯಮಗಳ ಮುಂದೆ ಅದನ್ನು ತೋರ್ಪಡಿಸಿಕೊಳ್ಳುತ್ತಿಲ್ಲ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕುಮಾರಸ್ವಾಮಿ, ಹೈಕೋರ್ಟ್ ತೀರ್ಪನ್ನು (high court verdict) ಸ್ವಾಗತಿಸುವುದು ಅಥವಾ ಸ್ವಾಗತಿಸದಿರೋದು ಇಲ್ಲಿ ಪ್ರಶ್ನೆಯಲ್ಲ. ನಮ್ಮ ದೇಶದ ಕಾನೂನು ವ್ಯವಸ್ಥೆಯಲ್ಲಿ ಹಲವಾರು ಸಂಸ್ಥೆಗಳಿವೆ ಮತ್ತು ಅವು ತಮ್ಮ ಕೆಲಸಗಳನ್ನು ಸಮರ್ಪಕ ಮತ್ತು ನಿಯಮಿತವಾಗಿ ಮಾಡುತ್ತಿರುತ್ತವೆ ಎಂದ ಕುಮಾರಸ್ವಾಮಿ, ಪದೇಪದೇ ತನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಶಿವಕುಮಾರ್ ಹೇಳೋದ್ಯಾಕೆ? ತಪ್ಪು ಮಾಡಿಲ್ಲದವರನ್ನು ಟಾರ್ಗೆಟ್ ಮಾಡುತ್ತಾರೆಯೇ? ಎಂದರು. ಈ ವಿಷಯಕ್ಕೆ ತಾನು ಮಹತ್ವ ನೀಡೋದಿಲ್ಲ ಎಂದು ಹೇಳಿದ ಕುಮಾರಸ್ವಾಮಿ, ದೇಶದಲ್ಲಿ ದರೋಡೆಕೋರರು ಸಹ ಅನುಕಂಪ ಗಿಟ್ಟಿಸುವ ಪ್ರಯತ್ನ ಮಾಡುತ್ತಾರೆ ಹಾಗಾಗಿ ತಾನದಕ್ಕೆ ಬಲಿಯಾಗಲಾರೆ ಎನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.