Daily Devotional: ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ದೇವಾಲಯದಲ್ಲಿ ಪ್ರಸಾದ ಯಾಕೆ ತಿರಸ್ಕರಿಸಬಾರದು ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇವಾಲಯಗಳು ನಮ್ಮ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸಲು, ಕಷ್ಟಗಳನ್ನು ಹೇಳಿಕೊಳ್ಳಲು ಮತ್ತು ಕರ್ಮಗಳನ್ನು ತೊಳೆದುಕೊಳ್ಳಲು ಒಂದು ಶಕ್ತಿ ಕೇಂದ್ರಗಳಾಗಿವೆ. ಇಂತಹ ಪವಿತ್ರ ಸ್ಥಳದಲ್ಲಿ ಭಗವಂತನಿಗೆ ಅರ್ಪಿಸಿದ ಪ್ರಸಾದವನ್ನು ನಿರ್ಲಕ್ಷಿಸುವುದು ಅಥವಾ ನಿರಾಕರಿಸುವುದು ದೊಡ್ಡ ತಪ್ಪು ಎಂದು ಗುರೂಜಿ ಹೇಳಿದ್ದಾರೆ.
ದೇವಾಲಯದಲ್ಲಿ ಪ್ರಸಾದ ಯಾಕೆ ತಿರಸ್ಕರಿಸಬಾರದು ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ದೇವಾಲಯಗಳು ನಮ್ಮ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸಲು, ಕಷ್ಟಗಳನ್ನು ಹೇಳಿಕೊಳ್ಳಲು ಮತ್ತು ಕರ್ಮಗಳನ್ನು ತೊಳೆದುಕೊಳ್ಳಲು ಒಂದು ಶಕ್ತಿ ಕೇಂದ್ರಗಳಾಗಿವೆ. ಇಂತಹ ಪವಿತ್ರ ಸ್ಥಳದಲ್ಲಿ ಭಗವಂತನಿಗೆ ಅರ್ಪಿಸಿದ ಪ್ರಸಾದವನ್ನು ನಿರ್ಲಕ್ಷಿಸುವುದು ಅಥವಾ ನಿರಾಕರಿಸುವುದು ದೊಡ್ಡ ತಪ್ಪು ಎಂದು ಗುರೂಜಿ ಹೇಳಿದ್ದಾರೆ.
ಈ ಪ್ರಸಾದ ಕೇವಲ ಆಹಾರ ಪದಾರ್ಥ ಮಾತ್ರವಲ್ಲದೆ, ಹೂವು, ಕುಂಕುಮ, ವಿಭೂತಿ ಹೀಗೆ ಯಾವುದೇ ರೂಪದಲ್ಲಿರಬಹುದು. ಪ್ರಸಾದವನ್ನು ತಿರಸ್ಕರಿಸಿದರೆ, ದೈವಿಕ ಕೃಪೆ ಮತ್ತು ದೈವಬಲವು ಹೊರಟುಹೋಗುತ್ತದೆ ಎಂದು ಹೇಳಲಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಇರುವ ಪ್ರಭಾವಳಿ ಅಥವಾ ಆಧ್ಯಾತ್ಮಿಕ ಶಕ್ತಿ ಕ್ಷೀಣಿಸುತ್ತದೆ. ದೇವಾಲಯಕ್ಕೆ ಭೇಟಿ ನೀಡಿದಾಗ ಎಲ್ಲರೂ ಸಮಾನರು. ಆದ್ದರಿಂದ, ಪ್ರಸಾದವನ್ನು ಭಕ್ತಿ ಮತ್ತು ಶ್ರದ್ಧೆಯಿಂದ ಸ್ವೀಕರಿಸಬೇಕು. ಇದನ್ನು ಸ್ವೀಕರಿಸುವುದರಿಂದ ಕೀರ್ತಿ, ಪ್ರತಿಷ್ಠೆಗಳು ಹೆಚ್ಚುತ್ತವೆ, ಮಾಟ ಮಂತ್ರ ದೋಷಗಳು ಮತ್ತು ಗ್ರಹಕಾಟಗಳು ನಿವಾರಣೆಯಾಗಿ ಶುಭ ಫಲಗಳು ದೊರೆಯುತ್ತವೆ. ಪ್ರಸಾದಕ್ಕೆ ಭಗವಂತನ ಲಹರಿಗಳು ಸೇರಿಕೊಂಡು ವಿಶೇಷ ಶಕ್ತಿಯನ್ನು ನೀಡುತ್ತವೆ ಎಂದು ಗುರೂಜಿ ವಿವರಿಸಿದ್ದಾರೆ.

