ಬೇಲೂರು: ಪಟಾಕಿ ಸಿಡಿಸಿದ್ದರಿಂದ ರೊಚ್ಚಿಗೆದ್ದ ಕಾಡಾನೆ ಮನೆ ಮುಂದೆ ನಿಲ್ಲಿಸಿದ್ದ ಆಟೋವನ್ನು ಮಾಡಿದ್ದೇನು ನೋಡಿ!

Edited By:

Updated on: Mar 30, 2026 | 10:38 AM

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದಲ್ಲಿ ದೈತ್ಯ ಒಂಟಿಸಲಗ ‘ಪೆನ್ಸಿಲ್ ಕೋರೆ’ ಅಟ್ಟಹಾಸ ಮೆರೆದಿದೆ. ಮನೆ ಮುಂದೆ ನಿಲ್ಲಿಸಿದ್ದ ಆಟೋವನ್ನು ಜಖಂಗೊಳಿಸಿರುವ ಕಾಡಾನೆ, ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಪಟಾಕಿ ಸಿಡಿಸಿದ್ದಕ್ಕೆ ರೊಚ್ಚಿಗೆದ್ದ ಆನೆ ದಾಳಿ ನಡೆಸುತ್ತಿರುವ ಆಘಾತಕಾರಿ ವಿಡಿಯೋ ಇಲ್ಲಿದೆ.

ಹಾಸನ, ಮಾರ್ಚ್ 30: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಗ್ರಾಮಕ್ಕೆ ನುಗ್ಗಿದ ‘ಪೆನ್ಸಿಲ್ ಕೋರೆ’ ಹೆಸರಿನ ದೈತ್ಯ ಒಂಟಿಸಲಗ, ಕೃಷ್ಣಪ್ಪ ಎಂಬುವವರಿಗೆ ಸೇರಿದ ಆಟೋವನ್ನು ಜಖಂಗೊಳಿಸಿದೆ. ಆನೆಯನ್ನು ಓಡಿಸಲು ಪಟಾಕಿ ಸಿಡಿಸಿದಾಗ ರೊಚ್ಚಿಗೆದ್ದ ಸಲಗ, ಮನೆಯ ಮುಂದಿದ್ದ ಆಟೋ ಮೇಲೆ ದಾಳಿ ನಡೆಸಿ ಆತಂಕ ಸೃಷ್ಟಿಸಿದೆ. ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಆನೆಗಳ ಹಿಂಡು ಬೀಡುಬಿಟ್ಟಿದ್ದು, ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಕೃಷಿಕರು ಭಯಪಡುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us