ಚಾಮರಾಜನಗರ ತಮಿಳುನಾಡು ಗಡಿ ದಿಂಬಂ ಘಾಟ್​ನಲ್ಲಿ ಕಾಡಾನೆ ಉಪಟಳ: ವಿಡಿಯೋ ವೈರಲ್

Edited By:

Updated on: Nov 01, 2025 | 11:18 AM

ನಂಗೆ ಕೊಡ್ಬೇಕಾದ ಮಾಮೂಲಿ ಕೊಟ್ಟು ಹೋಗು, ಇಲ್ಲಾಂದ್ರೆ ಬಿಡಲ್ಲ! ಕರ್ನಾಟಕ ತಮಿಳುನಾಡು ಗಡಿ ಭಾಗದ ದಿಂಬಂ ಘಾಟ್​​ನಲ್ಲಿ ಕಾಡಾನೆ ಉಪಟಳ ಮತ್ತೆ ಜೋರಾಗಿದೆ. ತಿಂಗಳ ಹಿಂದಷ್ಟೇ ಈ ಘಾಟ್ ರಸ್ತೆಯಲ್ಲಿ ಲಾರಿಗಳು, ವಾಹನಗಳಿಗೆ ಉಪಟಳ ಕೊಡುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ದಟ್ಟಾರಣ್ಯಕ್ಕೆ ಅಟ್ಟಿದ್ದರು. ಆದರೆ, ಅದೀಗ ಕಬ್ಬು ಹಾಗೂ ಬಾಳೆಗಾಗಿ ಮತ್ತೆ ರಸ್ತೆಗೆ ಬಂದಿದೆ.

ಚಾಮರಾಜನಗರ, ನವೆಂಬರ್ 1: ತಮಿಳುನಾಡಿನ ದಿಂಬಂ ಘಾಟ್​​ನಲ್ಲಿ ಕಾಡಾನೆ ಉಪಟಳ ಮತ್ತೆ ಮುಂದುವರೆದಿದೆ. ಕಬ್ಬು ಹಾಗೂ ಬಾಳೆಗಾಗಿ ಗಜಪಡೆ ಕಾಡಿನಿಂದ ನಾಡಿಗೆ ಮತ್ತೆ ಎಂಟ್ರಿಕೊಟ್ಟಿದೆ. ನಸುಕಿನಲ್ಲಿ ಮತ್ತೆ ಕಾಡಿನಿಂದ ನಾಡಿಗೆ ಬಂದ ಕಾಡಾನೆ ನಡು ರಸ್ತೆಯಲ್ಲೇ ಲಾರಿ ಹಾಗೂ ಗೂಡ್ಸ್ ವಾಹನ ಅಡ್ಡಗಟ್ಟಿದೆ. ಕಳೆದೊಂದು ತಿಂಗಳ ಹಿಂದೆ ಅರಣ್ಯ ಸಿಬ್ಬಂದಿ ಸ್ಪೆಷಲ್ ಡ್ರೈವ್ ಮಾಡಿ ಆನೆಯನ್ನು ಕಾಡಿಗಟ್ಟಿದ್ದರು. ಸತ್ಯಮಂಗಲ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿ ವಿಶೇಷ ಕಾರ್ಯಾಚರಣೆ ನಡೆಸಿದ್ದರು. ಆದರೆ, ಕಾಡಾನೆ ಮತ್ತೆ ರಸ್ತೆಗೆ ಬಂದಿದ್ದು, ಲಾರಿಗಳನ್ನು ಅಡ್ಡಗಟ್ಟುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 01, 2025 11:18 AM
Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More