ಕಟಾವಿಗೆ ಬಂದಿದ್ದ ಬೆಳೆ ತಿಂದು ತೇಗಿದ ಒಂಟಿ ಸಲಗ: ಆನೆ ಓಡಿಸಲು ರೈತರ ಹರಸಾಹಸ
ಕಾಡು ಪ್ರಾಣಿಗಳ ಹಾವಳಿಗೆ ಚಾಮರಾಜನಗರ ಜಿಲ್ಲೆಯ ಕಾಡಂಚಿನ ಗ್ರಾಮಗಳ ರೈತರು ಹೈರಾಣಾಗುತ್ತಿದ್ದಾರೆ. ಕಾಡಾನೆಗಳ ಹಾವಳಿಯಂತೂ ಮಿತಿ ಮೀರಿದ್ದು, ಹನೂರು ತಾಲೂಕಿನ ಕಾಡಂಚಿನ ಪ್ರದೇಶ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದಲ್ಲಿ ಹೊಲಕ್ಕೆ ಲಗ್ಗೆಯಿಟ್ಟ ಒಂಟಿ ಸಲಗ, 5 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಸಂಪೂರ್ಣ ನೆಲಸಮ ಮಾಡಿದೆ.
ಚಾಮರಾಜನಗರ, ಫೆಬ್ರವರಿ 18: ಗಡಿ ನಾಡು ಚಾಮರಾಜನಗರದಲ್ಲಿ ಮತ್ತೆ ಕಾಡಾನೆ ಹಾವಳಿ ಮಿತಿ ಮೀರಿದೆ. ಕಟಾವಿಗೆ ಬಂದಿದ್ದ ಮೆಕ್ಕೆಜೋಳವನ್ನು ಒಂಟಿ ಸಲಗ ತಿಂದು ತೇಗಿದ್ದು, ತಡರಾತ್ರಿ 3 ಗಂಟೆಯವರೆಗೂ ಕಾಡಾನೆ ಓಡಿಸಲು ಹನೂರು ತಾಲೂಕಿನ ಕಾಡಂಚಿನ ಪ್ರದೇಶ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದಲ್ಲಿ ರೈತರು ಹರಸಾಹಸ ಪಟ್ಟಿದ್ದಾರೆ. ನಂಜಶೆಟ್ಟಿ ಎಂಬುವವರಿಗೆ ಸೇರಿದ ಜಮೀನಿಗೆ ಲಗ್ಗೆಯಿಟ್ಟ ಕಾಡಾನೆ, 5 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಸಂಪೂರ್ಣ ಹಾಳು ಮಾಡಿದೆ. ಒಂಟಿ ಸಲಗವನ್ನು ಓಡಿಸುವ ವೇಳೆ ಬಿದ್ದು ರೈತನ ಕಾಲಿಗೆ ಗಾಯ ಕೂಡ ಆಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
