ಚಾರ್ಮಾಡಿ ಘಾಟ್ನಲ್ಲಿ KSRTC ಬಸ್ಗೆ ಅಡ್ಡನಿಂತ ಒಂಟಿ ಸಲಗ, ಮುಂದೇನಾಯ್ತು?
ಚಾರ್ಮಾಡಿ ಘಾಟ್ನಲ್ಲಿ ಪದೇಪದೇ ಒಂಟಿ ಸಲಗ ಕಾಣಿಸಿಕೊಳ್ಳುತ್ತಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ಬಳಿ ಕೆಎಸ್ಆರ್ಟಿಸಿ ಬಸ್ಗೆ ಒಂಟಿ ಸಲಗ ಅಡ್ಡನಿಂತು ಭಯ ಹುಟ್ಟಿಸಿದೆ. ಮಧ್ಯರಾತ್ರಿ ಒಂಟಿ ಸಲಗದ ಉಪಟಳಕ್ಕೆ ಪ್ರಯಾಣಿಕರು ಕಂಗಾಲಾದರು.
ಚಿಕ್ಕಮಗಳೂರು, ಜೂನ್.13: ಚಾರ್ಮಾಡಿ ಘಾಟ್ನಲ್ಲಿ(Charmadi Ghat) ಒಂಟಿ ಸಲಗದ ಆತಂಕ ಹೆಚ್ಚಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ಬಳಿ ಕೆಎಸ್ಆರ್ಟಿಸಿ ಬಸ್ಗೆ (KSRTC Bus) ಒಂಟಿ ಸಲಗ (Elephant) ಅಡ್ಡನಿಂತು ಭಯ ಹುಟ್ಟಿಸಿದೆ. ಮಧ್ಯರಾತ್ರಿ ಒಂಟಿ ಸಲಗದ ಉಪಟಳಕ್ಕೆ ಪ್ರಯಾಣಿಕರು ಕಂಗಾಲಾದರು. ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಗೆ ಅಡ್ಡಲಾಗಿ ಆನೆಯೊಂದು ಬಂದು ನಿಂತಿದ್ದು ಸುಮಾರು ಅರ್ಧ ಗಂಟೆಗಳ ಕಾಲ ದಾರಿಯೇ ಬಿಟ್ಟಿಲ್ಲ. ಅರ್ಧ ಗಂಟೆ ಚೂರೂ ಅಲುಗಾಡದೆ ಭಯದಲ್ಲೇ ಪ್ರಯಾಣಿಕರು ಕೂರುವಂತಾಗಿತ್ತು.
ಚಾರ್ಮಾಡಿ ಘಾಟ್ನಲ್ಲಿ ಪದೇಪದೇ ಒಂಟಿ ಸಲಗ ಕಾಣಿಸಿಕೊಳ್ಳುತ್ತಿದೆ. ಒಂಟಿ ಸಲಗದ ಸೆರೆಗೆ ಗ್ರಾಮಸ್ಥರು, ಪ್ರಯಾಣಿಕರು ಮನವಿ ಮಾಡಿದ್ದಾರೆ. ಈ ರೀತಿ ಆನೆಗಳು ಪ್ರಯಾಣಿಕರಿಗೆ ಕಾಟ ಕೊಡೋದು, ದಾಳಿ ಮಾಡೋದು ಹೊಸದೇನಲ್ಲ. ಆದರೆ ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು.
ಎರಡು ದಿನಗಳ ಹಿಂದಷ್ಟೇ ಪುತ್ತೂರಿನಲ್ಲೂ ಆನೆ ಕಾಟ ಶುರುವಾಗಿತ್ತು. ಗುಂಪಿನಿಂದ ತಪ್ಪಿಸಿಕೊಂಡು ಬಂದ ಕಾಡಾನೆಯೊಂದು ಕಳೆದ ಹತ್ತು ದಿನಗಳಿಂದ ಪುತ್ತೂರು ತಾಲೂಕಿನ ಹತ್ತಾರು ಹಳ್ಳಿಗಳಲ್ಲಿ ಓಡಾಡುತ್ತಿದೆ. ಇದರಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಹೋದ ಕಡೆಯಲ್ಲೆಲ್ಲ ಹಾನಿ ಮಾಡುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
ಫುಟ್ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ
ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?
ನಿರುದ್ಯೋಗಿಗಳಿಗೆ ಗುಡ್ನ್ಯೂಸ್ ನೀಡಿದ ಸಿಎಂ ಡಿಕೆ ಶಿವಕುಮಾರ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್

