ಆನೇಕಲ್ನಲ್ಲಿ ಕಾಡಾನೆ ಕಾಟ: ಗಂಗೊಂಡಹಳ್ಳಿಯಲ್ಲಿ ಜಮೀನಿಗೆ ನುಗ್ಗಿದ 8 ಕಾಡಾನೆಗಳ ಹಿಂಡು
ಸುಮಾರು 8 ಕಾಡಾನೆಗಳು ಅನೇಕಲ್ನ ಗುಮ್ಮಳಾಪುರ ಬಳಿಯ ಗಂಗೊಂಡಹಳ್ಳಿಯಲ್ಲಿ ಕೃಷಿ ಭೂಮಿಗೆ ನುಗ್ಗಿ ದಾಂಧಲೆ ನಡೆಸಿವೆ. ಸ್ಥಳಕ್ಕಾಗಮಿಸಿದ ತಮಿಳುನಾಡು ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳನ್ನು ಕಾಡಿಗೆ ಅಟ್ಟಿದ್ದಾರೆ. ವಿಡಿಯೋ ಇಲ್ಲಿದೆ.
ಆನೇಕಲ್, ಡಿಸೆಂಬರ್ 6: ಕರ್ನಾಟಕ ಗಡಿ ಭಾಗದ ಗುಮ್ಮಳಾಪುರ ಬಳಿಯ ಗಂಗೊಂಡಹಳ್ಳಿಯಲ್ಲಿ 8 ಕಾಡಾನೆಗಳು ಜಮೀನಿಗೆ ನುಗ್ಗಿ ಬೀಡುಬಿಟ್ಟಿದ್ದವು. ಆಹಾರ ಅರಸಿ ಬಂದ ಕಾಡಾನಾನೆಗಳು ಗ್ರಾಮದ ಹೊಲ, ಗದ್ದೆಗಳಲ್ಲಿ ಸಂಚರಿಸುತ್ತಿದ್ದವು. ನಂತರ ತಮಿಳುನಾಡು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ಕಾಡಾನೆಗಳನ್ನು ಕಾಡಿಗಟ್ಟಿದ್ದಾರೆ. ಮತ್ತೊಂದೆಡೆ, ಮೈಸೂರಿನಲ್ಲಿಯೂ ಕಾಡಾನೆ ಹಾವಳಿ ಮುಂದುವರಿದಿದೆ. ಕೆಆರ್ ನಗರ ತಾಲ್ಲೂಕಿನ ಮಂಡಿಗನಹಳ್ಳಿ ಅಡಗೂರು ಗ್ರಾಮದಲ್ಲಿ 2 ಕಾಡಾನೆಗಳು ದಾಳಿ ನಡೆಸಿದ್ದು, ಬಾಳೆ ಸೇರಿದಂತೆ ಅನೇಕ ಬೆಳೆಗಳನ್ನು ನಾಶ ಮಾಡಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
