ಮಂಗಳೂರು: ಕಡಬದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆಗಳು, ರಬ್ಬರ್ ತೋಟಕ್ಕೆ ಲಗ್ಗೆ ಇಟ್ಟ ಗಜಪಡೆ

Updated on: Jun 24, 2023 | 6:06 PM

Mangaluru: ಕಡಬ ತಾಲೂಕಿನಲ್ಲಿ ಕಾಡಾನೆಗಳು ಮತ್ತೆ ಕಾಣಿಸಿಕೊಂಡಿದ್ದು, ರಬ್ಬರ್ ತೋಟದಲ್ಲಿ ಆನೆಗಳ ಹಿಂಡು ನೋಡಿ ಜನರು ಆತಂಕಕ್ಕೊಳಗಾಗಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ (Kadaba) ಕಾಡಾನೆಗಳು (Wild Elephants) ಮತ್ತೆ ಕಾಣಿಸಿಕೊಂಡಿವೆ. ಐತೂರು ಭಾಗದ ಕೊಡೆಂಕೇರಿ, ಅಜನಾ ಎಂಬಲ್ಲಿ ಎರಡು ದೊಡ್ಡ ಆನೆಗಳೊಂದಿಗೆ ಒಂದು ಮರಿಯಾನೆ ಕಂಡುಬಂದಿದೆ. ರಬ್ಬರ್ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆಗಳನ್ನು ನೋಡಿದ ಜನರು ಆತಂಕಕ್ಕೊಳಗಾಗಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ಕಳೆದ ಮೂರು ದಿನಗಳಿಂದ ಕಾಡಾನೆಗಳು ತಾಲೂಕಿನಲ್ಲಿ ಬೀಡುಬಿಟ್ಟಿವೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Jun 24, 2023 06:05 PM
Follow Us
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More