Karnataka Assembly Polls Results; ಸೋಲನ್ನು ಗೌರವಯುತವಾಗಿ ಸ್ವೀಕರಿಸುತ್ತೇವೆ, ಆತ್ಮಾವಲೋಕನ ಮಾಡಿಕೊಳ್ಳುವ ಸಮಯ: ಬಿಎಸ್ ಯಡಿಯೂರಪ್ಪ

Updated on: May 13, 2023 | 3:11 PM

ರಾಜ್ಯದ ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡಿದಾಗ್ಯೂ ಪಕ್ಷಕ್ಕೆ ಹಿನ್ನಡೆಯಾಗಿರುವ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ಬೆಂಗಳೂರು: ಜನತೆ ನೀಡಿದ ತೀರ್ಪನ್ನು ಗೌರವಯುತ ಮತ್ತು ಕ್ರೀಡಾಸ್ಫೂರ್ತಿಯಿಂದ ಸ್ವೀಕರಿಸುವುದಾಗಿ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದರು. ಬೆಂಗಳೂರಿನ ತಮ್ಮ ಕಾವೇರಿ ನಿವಾಸದ ಮುಂಭಾಗದಲ್ಲಿ ಸಿದ್ಧಪ್ರತಿಯನ್ನು ಮಾಧ್ಯಮದ ಕೆಮೆರಾಗಳ ಮುಂದೆ ಓದಿದ ಯಡಿಯೂರಪ್ಪನವರು ಸೋಲು ಗೆಲುವು ಬಿಜೆಪಿಗೆ ಹೊಸದೇನೂ ಅಲ್ಲ, ಕೇವಲ ಎರಡು ಸ್ಥಾನಗಳಿಂದ ಅರಂಭಿಸಿ ಸ್ವಂತ ಬಲದಲ್ಲಿ ಸರ್ಕಾರ ರಚಿಸುವಷ್ಟು ಪಕ್ಷ ಬೆಳೆದಿದೆ ಎಂದು ಹೇಳಿದರು, ಜನಪ್ರಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ನೇತೃತ್ವದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು (development works) ಮಾಡಿದಾಗ್ಯೂ ಪಕ್ಷಕ್ಕೆ ಹಿನ್ನಡೆಯಾಗಿರುವ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More