2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ
2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಾಜ್ಯ ಪ್ರವಾಸ ನಡೆಸಿ ರೈತರ ಸಮಸ್ಯೆಗಳನ್ನು ಆಲಿಸುವುದಾಗಿ ಘೋಷಿಸಿದ್ದಾರೆ. ಹಿನ್ನಡೆ-ಮುನ್ನಡೆ ಎಂಬುದು ಶಾಶ್ವತವಲ್ಲ, ಎಲ್ಲವೂ ತಾತ್ಕಾಲಿಕ ಎಂದು ನಿಖಿಲ್ ಅವರು ಅಭಿಪ್ರಾಯಪಟ್ಟಿದ್ದಾರೆ.
ರಾಮನಗರ, ಸೆಪ್ಟೆಂಬರ್ 17: 2023ರ ಚುನಾವಣೆ ಸೋಲಿನ ಕಹಿ ಕಾರ್ಯಕರ್ತರಲ್ಲಿ ಇನ್ನೂ ಮಾಸಿಲ್ಲ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರನ್ನ ಕಾಣಲು ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ. ಹೀಗಾಗಿ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸುವುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಹಿನ್ನಡೆ-ಮುನ್ನಡೆ ಶಾಶ್ವತವಲ್ಲ, ಎಲ್ಲವೂ ತಾತ್ಕಾಲಿಕ. ರಾಜ್ಯದಲ್ಲಿ 101 ತಾಲೂಕು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಹೀಗಾಗಿ ರಾಜ್ಯ ಪ್ರವಾಸ ಮಾಡುತ್ತೇನೆ, ರೈತರ ಸಮಸ್ಯೆ ಕೇಳುತ್ತೇನೆ ಎಂದವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 17, 2026 01:38 PM
Follow Us
Latest Videos
ಪೆಟ್ರೋಲ್ ಬಂಕ್ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್ಎಫ್ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು

