2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ
2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಾಜ್ಯ ಪ್ರವಾಸ ನಡೆಸಿ ರೈತರ ಸಮಸ್ಯೆಗಳನ್ನು ಆಲಿಸುವುದಾಗಿ ಘೋಷಿಸಿದ್ದಾರೆ. ಹಿನ್ನಡೆ-ಮುನ್ನಡೆ ಎಂಬುದು ಶಾಶ್ವತವಲ್ಲ, ಎಲ್ಲವೂ ತಾತ್ಕಾಲಿಕ ಎಂದು ನಿಖಿಲ್ ಅವರು ಅಭಿಪ್ರಾಯಪಟ್ಟಿದ್ದಾರೆ.
ರಾಮನಗರ, ಸೆಪ್ಟೆಂಬರ್ 17: 2023ರ ಚುನಾವಣೆ ಸೋಲಿನ ಕಹಿ ಕಾರ್ಯಕರ್ತರಲ್ಲಿ ಇನ್ನೂ ಮಾಸಿಲ್ಲ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರನ್ನ ಕಾಣಲು ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ. ಹೀಗಾಗಿ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸುವುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಹಿನ್ನಡೆ-ಮುನ್ನಡೆ ಶಾಶ್ವತವಲ್ಲ, ಎಲ್ಲವೂ ತಾತ್ಕಾಲಿಕ. ರಾಜ್ಯದಲ್ಲಿ 101 ತಾಲೂಕು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಹೀಗಾಗಿ ರಾಜ್ಯ ಪ್ರವಾಸ ಮಾಡುತ್ತೇನೆ, ರೈತರ ಸಮಸ್ಯೆ ಕೇಳುತ್ತೇನೆ ಎಂದವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 17, 2026 01:38 PM
Loading...
Unable to load recommendations.
Follow Us
