ಲೋಕಾಯುಕ್ತ ಅಧಿಕಾರಿಗಳ ಮುಂದೆ ಬುಧವಾರ ವಿಚಾರಣೆಗೆ ಹಾಜರಾಗುತ್ತೇನೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Nov 04, 2024 | 7:34 PM

ನವೆಂಬರ್ 6ರಂದು ಮುಖ್ಯಮಂತ್ರಿಯವರು ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಬೇಕಿದೆ. ನೋಟೀಸ್ ಜಾರಿಯಾಗಿರುವ ವಿಷಯ ಪ್ರಾಯಶಃ ಸಿದ್ದರಾಮಯ್ಯ ಗಮನಕ್ಕೆ ಅದಾಗಲೇ ಬಂದಿತ್ತಾದರೂ ಮಾಧ್ಯಮದವರು ಅದರ ಬಗ್ಗೆ ಪ್ರಶ್ನೆ ಬಗ್ಗೆ ಕೇಳಿದಾಗ ಅವರ ಮುಖ ಬಿಳಚಿಕೊಂಡಂತೆ ಕಂಡಿತು.

ಹಾವೇರಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ಸೈಟು ಪಡೆದಿರುವ ಅರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೈಸೂರು ಲೋಕಾಯುಕ್ತ ಕಚೇರಿಯಿಂದ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿಯಾಗಿದೆ. ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಹುರಳಿಕುಪ್ಪಿಯಲ್ಲಿ ಚುನಾವಣಾ ಪ್ರಚಾರದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿದ್ದರಾಮಯ್ಯ ತಾನು ವಿಚಾರಣೆಗೆ ಹಾಜರಾಗುವುದದಾಗಿ ತಿಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ವಕ್ಫ್​ ಆಸ್ತಿ ವಿವಾದ: ಸಿದ್ದರಾಮಯ್ಯಗೊಂದು ಕುಮಾರಸ್ವಾಮಿ ನೇರ ಸವಾಲ್

Published on: Nov 04, 2024 07:32 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.