AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಷ್ಪಕ್ಷಪಾತ ತನಿಖೆ ನಡೆದು ಅಗಲಿದ ಎಸ್​ಡಿಎ ಕುಟುಂಬಕ್ಕೆ ನ್ಯಾಯ ಸಿಗಬೇಕು: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

ನಿಷ್ಪಕ್ಷಪಾತ ತನಿಖೆ ನಡೆದು ಅಗಲಿದ ಎಸ್​ಡಿಎ ಕುಟುಂಬಕ್ಕೆ ನ್ಯಾಯ ಸಿಗಬೇಕು: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 06, 2024 | 12:23 PM

Share

ಮಾಧ್ಯಮಗಳೊಂದಿಗೆ ಮಾತಾಡುವಾಗ ಲಕ್ಷ್ಮಿ ಹೆಬ್ಬಾಳ್ಕರ್ ಎಲ್ಲ ಸಚಿವರಿಗೆ 10-15 ಆಪ್ತ ಕಾರ್ಯದರ್ಶಿಗಳಿರುತ್ತಾರೆ ಅನ್ನುತ್ತಾರೆ. ಇದು ನಿಜಕ್ಕೂ ಕನ್ನಡಿಗರಿಗೆ ಗೊತ್ತಿರದ ಸಂಗತಿ, ಸಚಿವರಿಗೆ ಒಬ್ಬರು ಹೆಚ್ಚೆಂದರೆ ಇಬ್ಬರು ಪಿಎಗಳಿರುತ್ತಾರೆ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೂ ಸಚಿವೆ ತಮ್ಮ ಕಾರ್ಯದರ್ಶಿಗಳೆಂದು ಎಣಿಸುತ್ತಾರೋ?

ಬೆಳಗಾವಿ: ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಸಾವಿಗೆ ಶರಣಾಗುವ ಮೊದಲು ಬರೆದಿರುವ ಡೆತ್​ನೋಟ್​​ನಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಕಾರ್ಯದರ್ಶಿಯ ಉಲ್ಲೇಖವಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಂಥ ಘಟನೆಗಳು ನಡೆಯಬಾರದು, ಮಂಗಳವಾರ ಬಹಳ ಬ್ಯೂಸಿಯಾಗಿದ್ದ ಕಾರಣ ವಿಷಯದ ಬಗ್ಗೆ ತನ್ನಲ್ಲಿ ಮಾಹಿತಿ ಇಲ್ಲ, ಆದರೆ ಎಸ್​ಡಿಎ ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು, ನಿಷ್ಪಕ್ಷಪಾತ ತನಿಖೆ ನಡೆದು ಸತ್ಯ ಹೊರಬರಬೇಕು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಳಗಾವಿ: ತಹಶೀಲ್ದಾರ್​ ಕಚೇರಿಯಲ್ಲೇ ಎಸ್​ಡಿಎ ರುದ್ರಣ್ಣ ಆತ್ಮಹತ್ಯೆ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More