ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದ ಎಲ್ಲ ಹಗರಣಗಳನ್ನು ತನಿಖೆಗೆ ಒಪ್ಪಿಸುವೆ: ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರ ಮಾತು ಮುಗಿದ ಬಳಿಕ ಇವತ್ತಿನ ಕಾರ್ಯಕಲಾಪಗಳನ್ನು ಕೊನೆಗೊಳಿಸಿದ ಸ್ಪೀಕರ್ ಖಾದರ್ ಅವರು, ರಾಜ್ಯದೆಲ್ಲೆಡೆ ಮಳೆ ಸುರಿಯುತ್ತಿರುವುದರಿಂದ ಊರುಗಳಿಗೆ ತೆರಳುವ ಸದಸ್ಯರು ಸೋಮವಾರ ಬೆಳಗಿನವರೆಗೆ ಕಾಯದೆ ರವಿವಾರ ರಾತ್ರಿಯೇ ಬೆಂಗಳೂರಿಗೆ ಬಂದು ಸೋಮವಾರ ಸರಿಯಾದ ಸಮಯಕ್ಕೆ ಸದನದಲ್ಲಿ ಹಾಜರಿರಬೇಕೆಂದು ತಾಕೀತು ಮಾಡಿದರು.

ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದ ಎಲ್ಲ ಹಗರಣಗಳನ್ನು ತನಿಖೆಗೆ ಒಪ್ಪಿಸುವೆ: ಸಿದ್ದರಾಮಯ್ಯ
|

Updated on: Jul 19, 2024 | 6:07 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸದನದಲ್ಲಿ ವಿರೋಧಪಕ್ಷಗಳ ನಾಯಕರ ವಿರುದ್ಧ ಅಕ್ಷರಶಃ ಬೆಂಕಿಯುಗುಳಿದರು. ಅವರು ಮತ್ತು ಸ್ಪೀಕರ್ ಯುಟಿ ಖಾದರ್ ಹಲವಾರು ಬಾರಿ ಗಲಾಟೆ ಮಾಡದಂತೆ ಬಿಜೆಪಿ ಶಾಸಕರನ್ನು ಕೇಳಿಕೊಂಡರೂ ಸುಮ್ಮನಾಗದಾದಾಗ ಅವರು ವ್ಯಗ್ರರಾದರು. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಾಕತ್ತಿದ್ದರೆ ಅಂತ ತಾಕತ್ತಿನ ಮಾತಾಡತ್ತಿದ್ದ ಬಿಜೆಪಿಗೆ ಜನ ಕೇವಲ 66 ಸೀಟು ಮಾತ್ರ ನೀಡಿ ನಮ್ಮನ್ನು ಅಧಿಕಾರಕ್ಕೆ ತಂದರು ಅಂತ ಸಿದ್ದರಅಮಯ್ಯ ಹೇಳಿದಾಗ ಅರ್ ಅಶೋಕ ಲೋಕಸಭಾ ಚುನಾವಣೆಯಲ್ಲಿ ನಿಮಗೆ ಸೋಲಾಗಿದೆ ಎಂದರು. ಬಿಜೆಪಿ ನಾಯಕರು ತಮ್ಮ ಸರ್ಕಾರದ ಹೆಸರಿಗೆ ಕಳಂಕ ತರುವ ಪ್ರಯತ್ನ ಮಾಡುತ್ತಿದ್ದಾರೆ, ಇನ್ನು ತಾನು ಸುಮ್ಮನಿರಲ್ಲ ಅವರ ಅಧಿಕಾರಾವಧಿಯಲ್ಲಿ ನಡೆದ ಎಲ್ಲ ಹಗರಣಗಳನ್ನು ತನಿಖೆಗೆ ಒಪ್ಪಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ 89. 63 ಕೋಟಿ ರೂ. ತೆಲಂಗಾಣಗೆ ಹೋಗಿದೆ ಅನ್ನೋದನ್ನು ಅಂಗೀಕರಿಸಿದ ಸಿಎಂ ಅದನ್ನು ರಿಕವರಿ ಮಾಡುವ ಕೆಲಸ ನಡೆಯುತ್ತಿದೆ ಎಂದರು. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವತ್ತೂ ತನಿಖೆಗೆ ಬಾರದ ಈಡಿ ಈಗ್ಯಾಕೆ ಬಂದಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮೂವರು ನಾಯಕರಿಂದ ನನ್ನ ವಿರುದ್ಧ ಷಡ್ಯಂತ್ರ: ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಳಲು

Follow us
ಸಿದ್ದರಾಮಯ್ಯಗೆ ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುತ್ತೆ
ಸಿದ್ದರಾಮಯ್ಯಗೆ ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುತ್ತೆ
ಭಾರೀ ಮಳೆಯಿಂದ ಕಣ್ಣೆದುರೇ ಕುಸಿದು ಬಿದ್ದ ಮನೆ; ವಿಡಿಯೋ ವೈರಲ್
ಭಾರೀ ಮಳೆಯಿಂದ ಕಣ್ಣೆದುರೇ ಕುಸಿದು ಬಿದ್ದ ಮನೆ; ವಿಡಿಯೋ ವೈರಲ್
ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ
ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ
ಸಿಂಗಾಪುರದಲ್ಲಿ ಡೋಲು ಬಾರಿಸಿ ಸಂಭ್ರಮಿಸಿದ ಪ್ರಧಾನಿ ಮೋದಿ
ಸಿಂಗಾಪುರದಲ್ಲಿ ಡೋಲು ಬಾರಿಸಿ ಸಂಭ್ರಮಿಸಿದ ಪ್ರಧಾನಿ ಮೋದಿ
ಮೈಸೂರು: ದಸರಾ ಆನೆಗಳ ಮಾವುತರ ಮಕ್ಕಳ ಜತೆ ವಾಲಿಬಾಲ್ ಆಡಿದ ಸಚಿವ ಮಹದೇವಪ್ಪ
ಮೈಸೂರು: ದಸರಾ ಆನೆಗಳ ಮಾವುತರ ಮಕ್ಕಳ ಜತೆ ವಾಲಿಬಾಲ್ ಆಡಿದ ಸಚಿವ ಮಹದೇವಪ್ಪ
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ: ಡಿಕೆ ಸುರೇಶ್​
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ: ಡಿಕೆ ಸುರೇಶ್​
ಇದಪ್ಪ ಕ್ಯಾಚ್ ಅಂದ್ರೆ... ಕೈಲ್ ಮೇಯರ್ಸ್ ಫೀಲ್ಡಿಂಗ್​ಗೆ ಬಹುಪರಾಕ್
ಇದಪ್ಪ ಕ್ಯಾಚ್ ಅಂದ್ರೆ... ಕೈಲ್ ಮೇಯರ್ಸ್ ಫೀಲ್ಡಿಂಗ್​ಗೆ ಬಹುಪರಾಕ್
ನಮ್ಮ ಮೆಟ್ರೋ: ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರಬಂದ ತುಂಗಾ ಟಿಬಿಎಂ
ನಮ್ಮ ಮೆಟ್ರೋ: ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರಬಂದ ತುಂಗಾ ಟಿಬಿಎಂ
ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?
ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?
ಆ್ಯಪಲ್ ಐಫೋನ್ 15 ಪ್ಲಸ್ ಫ್ಲಿಪ್​ಕಾರ್ಟ್​ ₹13,601 ಡಿಸ್ಕೌಂಟ್ ಆಫರ್
ಆ್ಯಪಲ್ ಐಫೋನ್ 15 ಪ್ಲಸ್ ಫ್ಲಿಪ್​ಕಾರ್ಟ್​ ₹13,601 ಡಿಸ್ಕೌಂಟ್ ಆಫರ್