ನನ್ನ ಹೆಸರಿನಲ್ಲಿ ಹಣ ಮಾಡ್ತಿರುವವರನ್ನು ನೋಡ್ತೇನೆ, ಹಣವೆಲ್ಲ ಆಸ್ಪತ್ರೆ ಸೇರುವಂತೆ ಮಾಡುತ್ತೇನೆ: ದೈವದ ನುಡಿ

Updated on: Oct 09, 2025 | 3:16 PM

ಕಾಂತಾರ ಚಾಪ್ಟರ್ 1 ಸಿನಿಮಾ ಬಿಡುಗಡೆ ಆದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ದೈವದ ಅನುಕರಣೆ ಮಾಡುತ್ತಿರುವವರ ವಿಡಿಯೋ ಹರಿದಾಡುತ್ತಿವೆ. ‘ಕಾಂತಾರ’ ಸಿನಿಮಾ ಮತ್ತು ದೈವದ ಅಪಹಾಸ್ಯ ಮಾಡುತ್ತಿರುವುದು ದೈವಾರಾಧಕರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಈ ಸಂಬಂಧ ಸಾಮೂಹಿಕ ಪ್ರಾರ್ಥನೆ ವೇಳೆ ದೈವಾರಾಧಕರಿಗೆ ಪಿಲಿಚಂಡಿ ದೈವದ ನುಡಿ ನುಡಿದೆ.

ಮಂಗಳೂರು, (ಅಕ್ಟೋಬರ್ 09): ಕಾಂತಾರ ಚಾಪ್ಟರ್ 1 ಸಿನಿಮಾ ಬಿಡುಗಡೆ ಆದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ದೈವದ ಅನುಕರಣೆ ಮಾಡುತ್ತಿರುವವರ ವಿಡಿಯೋ ಹರಿದಾಡುತ್ತಿವೆ. ‘ಕಾಂತಾರ’ ಸಿನಿಮಾ ಮತ್ತು ದೈವದ ಅಪಹಾಸ್ಯ ಮಾಡುತ್ತಿರುವುದು ದೈವಾರಾಧಕರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಈ ಸಂಬಂಧ ಸಾಮೂಹಿಕ ಪ್ರಾರ್ಥನೆ ವೇಳೆ ದೈವಾರಾಧಕರಿಗೆ ಪಿಲಿಚಂಡಿ ದೈವದ ನುಡಿ ನುಡಿದೆ. ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನೋಡಿಕೊಳ್ಳುತ್ತೇನೆ. ಹಣವೆಲ್ಲ ಆಸ್ಪತ್ರೆ ಸೇರುವಂತೆ ಮಾಡುತ್ತೇನೆ. ನನ್ನನ್ನು ಅಪಚಾರ ಮಾಡುವವರಿಗೆ ಬುದ್ಧಿ ಕಲಿಸುತ್ತೇನೆ. ಇನ್ಮುಂದೆ ಎಲ್ಲಾ ದೇವಸ್ಥಾನಗಳಲ್ಲಿ ಚಿತ್ರೀಕರಣ ನಿಲ್ಲಿಸಿ. ನೀವು ಹೋರಾಟವನ್ನು ಮುಂದುವರಿಸಿ. ನಾನು ನಿಮ್ಮ ಬೆನ್ನ ಹಿಂದೆ ಇದ್ದೇನೆ ಎಂದು ದೈವದ ಆಕ್ರೋಶದ ನುಡಿ ನುಡಿದಿದೆ.