AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ: ಅಡ್ಡಮತದಾನ ಮಾಡಿದವರಿಗೆ ಶಾಸ್ತಿ ಫಿಕ್ಸ್ ಎಂದ ಅಶೋಕ್

ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ: ಅಡ್ಡಮತದಾನ ಮಾಡಿದವರಿಗೆ ಶಾಸ್ತಿ ಫಿಕ್ಸ್ ಎಂದ ಅಶೋಕ್

ರಮೇಶ್ ಬಿ. ಜವಳಗೇರಾ
|

Updated on:Jun 21, 2026 | 3:14 PM

Share

ಅಡ್ಡಮತದಾನ ಮಾಡಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಚರ್ಚೆಗಳು ನಡೆದಿವೆ. ಆದ್ರೆ, ಅಡ್ಡಮತದಾನ ಮಾಡಿದವರು ಯಾರು ಎಂದು ಪತ್ತೆ ಮಾಡುವುದೇ ಒಂದು ಸವಾಲ್ ಆಗಿದೆ. ಇದರ ಮಧ್ಯೆ ಬಿಜೆಪಿ ಇದೀಗ ಅಂತಿಮವಾಗಿ ಧರ್ಮಸ್ಥಳ ಮಂಜುನಾಥನ ಮೇಲೆ ಆಣೆ ಪ್ರಮಾಣ ಮಾಡಿಸಲು ಮುಂದಾಗಿದೆ. ಈ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಅಡ್ಡಮತದಾನದ ಬಗ್ಗೆ ಚರ್ಚೆ ಮಾಡಿ ತಪ್ಪಿತಸ್ಥರಿಗೆ ಬುದ್ಧಿ ಕಲಿಸುತ್ತೇವೆ. ಕೇಂದ್ರದ ನಾಯಕರ ಜೊತೆ ಗಂಭೀರವಾಗಿ ಚರ್ಚೆ ನಡೆಸಿ ಬಳಿಕ ಕ್ರಮ ಕೈಗೊಳ್ಳುತ್ತೇವೆ. ಈ ಜನ್ಮದಲ್ಲಿ ಚುನಾವಣೆ ನಿಲ್ಲಬಾರದು ಹಾಗೇ ಮಾಡ್ತೀವಿ ಎಂದು ಖಡಕ್ ಆಗಿ ಹೇಳಿದ್ದಾರೆ.

ಬೆಂಗಳೂರು, (ಜೂನ್ 21): ಕರ್ನಾಟಕ ವಿಧಾನಪರಿಷತ್​​​ ಚುನಾವಣೆಯಲ್ಲಿ ಮೈತ್ರಿಪಕ್ಷಗಳಾದ ಜೆಡಿಎಸ್ ಹಾಗೂ ಜೆಡಿಎಸ್ ಶಾಸಕರು ಅಡ್ಡಮತದಾನ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಅಡ್ಡಮತದಾನದಿಂದಾಗಿ ಜೆಡಿಎಸ್ ಹಾಗೂ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅಡ್ಡಮತದಾನ ಮಾಡಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಚರ್ಚೆಗಳು ನಡೆದಿವೆ. ಆದ್ರೆ, ಅಡ್ಡಮತದಾನ ಮಾಡಿದವರು ಯಾರು ಎಂದು ಪತ್ತೆ ಮಾಡುವುದೇ ಒಂದು ಸವಾಲ್ ಆಗಿದೆ. ಇದರ ಮಧ್ಯೆ ಬಿಜೆಪಿ ಇದೀಗ ಅಂತಿಮವಾಗಿ ಧರ್ಮಸ್ಥಳ ಮಂಜುನಾಥನ ಮೇಲೆ ಆಣೆ ಪ್ರಮಾಣ ಮಾಡಿಸಲು ಮುಂದಾಗಿದೆ. ಈ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಅಡ್ಡಮತದಾನದ ಬಗ್ಗೆ ಚರ್ಚೆ ಮಾಡಿ ತಪ್ಪಿತಸ್ಥರಿಗೆ ಬುದ್ಧಿ ಕಲಿಸುತ್ತೇವೆ. ಕೇಂದ್ರದ ನಾಯಕರ ಜೊತೆ ಗಂಭೀರವಾಗಿ ಚರ್ಚೆ ನಡೆಸಿ ಬಳಿಕ ಕ್ರಮ ಕೈಗೊಳ್ಳುತ್ತೇವೆ. ಈ ಜನ್ಮದಲ್ಲಿ ಚುನಾವಣೆ ನಿಲ್ಲಬಾರದು ಹಾಗೇ ಮಾಡ್ತೀವಿ ಎಂದು ಖಡಕ್ ಆಗಿ ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 21, 2026 03:13 PM

Follow Us