Dasara Mahotsav-2024: ಕೇವಲ ದಸರಾ ಉತ್ಸವಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸುವೆನೆಂದ ಸಿದ್ದರಾಮಯ್ಯ

Updated on: Oct 11, 2024 | 4:08 PM

Dasara Mahotsav-2024: ಸಿದ್ದರಾಮಯ್ಯ ವಿಚಾರವಾದಿ ಎಂದು ಗುರುತಿಸಿಕೊಂಡವರು, ಹಾಗಂತ ನಾಸ್ತಿಕರೇನೂ ಅಲ್ಲ. ಇವತ್ತು ಮೈಸೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡುವಾಗ ಅವರು ತಾಯಿ ಚಾಮುಂಡೇಶ್ಚರಿಗೆ ಅತಿಹೆಚ್ಚು ಬಾರಿ ಪುಷ್ಪಾರ್ಚನೆ ಮಾಡಿದ್ದು ತಾನೇ, ಮತ್ತು ತನ್ನ ಮೇಲೆ ದೇವರ ಆಶೀರ್ವಾದ ಸದಾ ಇದೆ ಅಂತ ಹೇಳಿದರು.

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದ ಪ್ರಶ್ನೆಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೆದರಿಕೆಯೋ ಅಥವಾ ಅವುಗಳಿಂದ ಬೇಸತ್ತಿದ್ದಾರೋ? ಇವತ್ತು ಮೈಸೂರಲ್ಲಿ ಮಾಧ್ಯಮದವರು ಕಂಡೊಡನೆ ಅವರು ಹಾಕಿದ ಷರತ್ತು ಏನು ಗೊತ್ತಾ? ಕೇವಲ ದಸರಾಗೆ ಸಂಬಂಧಿಸಿದ ಪ್ರಶ್ನೆಗಳನ್ನು ಮಾತ್ರ ಕೇಳಬೇಕು! ಎಲ್ಲರಿಗೂ ದಸರಾ ಹಬ್ಬದ ಶುಭಾಷಯಗಳನ್ನು ಹೇಳಿದ ಸಿದ್ದರಾಮಯ್ಯ ನವರಾತ್ರಿಯ ಕೊನೆಯ ದಿನವಾಗಿರುವ ನಾಳೆ ಜಂಬೂ ಸವಾರಿ ನಡೆಯಲಿದ್ದು ತಾನು ಅದರಲ್ಲಿ ಭಾಗವಹಿಸುತ್ತಿರುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ನಾಳೆಯಿಂದ ಮೂರು ದಿನ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಲಭ್ಯವಿರಲ್ಲ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More