ಹಾಸನ: ಶ್ರಾವಣ ಮಾಸದ ಕೊನೇ ಶನಿವಾರ ಹಿನ್ನೆಲೆಯಲ್ಲಿ ಜಿಲ್ಲೆಯ ಮಾವಿನಕೆರೆಯಲ್ಲಿರುವ ರಂಗನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿರುವ ಬಗ್ಗೆಕ ಪ್ರಶ್ನೆ ಕೇಳಿದಾಗ, ಇದುವರೆಗೆ ತಾನು ಅದರ ಬಗ್ಗೆ ಮಾತಾಡಿಲ್ಲ ಆದರೆ ಸಮಯ ಬಂದಾಗ ಮಾತಾಡುವುದಾಗಿ ಹೇಳಿದರು. ಕೆಲ ದಿನಗಳ ನಂತರ ಹಾಸನ ಜಿಲ್ಲೆಯಲ್ಲಿ ಓಡಾಡಿ ಪಕ್ಷವನ್ನು ಪುನಶ್ಚೇತನಗೊಳಿಸುವುದಾಗಿಯೂ ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದೆಹಲಿ ಮೆಟ್ರೋದಲ್ಲಿ ಹೆಚ್ಡಿ ದೇವೇಗೌಡ ಪ್ರಯಾಣ: ಬಹುದಿನದ ಆಸೆ ನೆರವೇರಿತು ಎಂದ ಮಾಜಿ ಪ್ರಧಾನಿ