ಎನ್ಡಿಎ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವರಾಗ್ತೀರಾ? ಕುಮಾರಸ್ವಾಮಿ ಏನಂದ್ರು ನೋಡಿ
ದೇಶದಲ್ಲಿ ಭರ್ಜರಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮಂಡ್ಯದಲ್ಲಿ ಪೋಸ್ಟಲ್ ಬ್ಯಾಲೆಟ್ ಶುರುವಾಗಿದೆ. ಕೊನೆಯ ಹಂತದ ವರೆಗೂ ಮುನ್ನಡೆಯಲ್ಲಿ ಇರುತ್ತೇನೆ ಎಂದು ಕುಮಾರಸ್ವಾಮಿ ಎನ್ಡಿಎ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ಏನಂದರು? ಇಲ್ಲಿದೆ ನೋಡಿ
ಬೆಂಗಳೂರು, ಜೂನ್ 4: ಲೋಕಸಭೆ ಚುನಾವಣೆ ಫಲಿತಾಂಶ (Lok Sabha Election Result) ಪ್ರಕಟವಾಗುತ್ತಿದ್ದು, ಮಂಡ್ಯದಲ್ಲಿ (Mandya) ಜೆಡಿಎಸ್ ಅಭ್ಯರ್ಥಿ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಮುನ್ನಡೆ ಕಾಯ್ದುಕೊಂಡಿದ್ದಾರೆ. ಗೆಲುವಿನ ಬಗ್ಗೆ ಭರವಸೆ ವ್ಯಕ್ತಪಡಿಸಿದ ಅವರು, ಮಂಡ್ಯ ಕ್ಷೇತ್ರದ ಜನತೆ ನನಗೆ ಆಶೀರ್ವಾದ ಮಾಡುತ್ತಾರೆ. ಎಕ್ಸಿಟ್ ಪೋಲ್ ಸರ್ವೆ ಶೇ 90ರಷ್ಟು ಸತ್ಯವಾಗುತ್ತದೆ ಎಂದರು. ಕರ್ನಾಟಕದಲ್ಲಿ 25 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ದೇಶದಲ್ಲಿ ಎನ್ಡಿಎ ಹೆಚ್ಚು ಸ್ಥಾನಗಳು ಗೆಲ್ಲುವ ವಿಶ್ವಾಸವಿದೆ ಎಂದರು.
ದೇಶದಲ್ಲಿ ಭರ್ಜರಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮಂಡ್ಯದಲ್ಲಿ ಪೋಸ್ಟಲ್ ಬ್ಯಾಲೆಟ್ ಶುರುವಾಗಿದೆ. ಕೊನೆಯ ಹಂತದ ವರೆಗೂ ಮುನ್ನಡೆಯಲ್ಲಿ ಇರುತ್ತೇನೆ. ನಾನು ಚುನಾವಣೆ ಶುರುವಿನಿಂದಲೂ ಉತ್ಸಾಹದಿಂದ ಇದ್ದೇನೆ.
ಎನ್ಡಿಎ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಬಗ್ಗೆ ನನಗೆ ಹೆಚ್ಚಿನ ಆಸಕ್ತಿ ಏನೂ ಇಲ್ಲ. ಮಂಡ್ಯ ಜಿಲ್ಲೆಗೆ ನನ್ನ ಕೈಲಾದ ಅಳಿಲು ಸೇವೆಯನ್ನು ಮಾಡುತ್ತೇನೆ. ರಾಜ್ಯಕ್ಕೆ ಏನಾಗಬೇಕೋ ಅದನ್ನು ಮಾಡುವುದು ನನ್ನ ಮೊದಲ ಆದ್ಯತೆ ಎಂದು ಕುಮಾರಸ್ವಾಮಿ ಹೇಳಿದರು.
ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದಕ್ಕೂ ಮುನ್ನ ಆದಿ ಚುಂಚನಗಿರಿ ಮಠದಲ್ಲಿ ಗಂಗಾದೇಶ್ವರನಿಗೆ ಪೂಜೆ ಸಲ್ಲಿಸಿ ನಿರ್ಮಾಲನಂದ ಸ್ವಾಮಿಜಿ ಬಳಿ ಆಶೀರ್ವಾದ ಪಡೆದರು.
ಲೋಕಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೇಪಾಳಕ್ಕೆ ವಾಪಸ್ ಹೊರಟ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್ ಕಂಪನಿ

Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ

Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
