ಎನ್​ಡಿಎ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವರಾಗ್ತೀರಾ? ಕುಮಾರಸ್ವಾಮಿ ಏನಂದ್ರು ನೋಡಿ

Updated on: Jun 04, 2024 | 9:19 AM

ದೇಶದಲ್ಲಿ ಭರ್ಜರಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮಂಡ್ಯದಲ್ಲಿ ಪೋಸ್ಟಲ್ ಬ್ಯಾಲೆಟ್ ಶುರುವಾಗಿದೆ. ಕೊನೆಯ ಹಂತದ ವರೆಗೂ ಮುನ್ನಡೆಯಲ್ಲಿ ಇರುತ್ತೇನೆ ಎಂದು ಕುಮಾರಸ್ವಾಮಿ ಎನ್​ಡಿಎ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ಏನಂದರು? ಇಲ್ಲಿದೆ ನೋಡಿ

ಬೆಂಗಳೂರು, ಜೂನ್ 4: ಲೋಕಸಭೆ ಚುನಾವಣೆ ಫಲಿತಾಂಶ (Lok Sabha Election Result) ಪ್ರಕಟವಾಗುತ್ತಿದ್ದು, ಮಂಡ್ಯದಲ್ಲಿ (Mandya) ಜೆಡಿಎಸ್ ಅಭ್ಯರ್ಥಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮುನ್ನಡೆ ಕಾಯ್ದುಕೊಂಡಿದ್ದಾರೆ. ಗೆಲುವಿನ ಬಗ್ಗೆ ಭರವಸೆ ವ್ಯಕ್ತಪಡಿಸಿದ ಅವರು, ಮಂಡ್ಯ ಕ್ಷೇತ್ರದ ಜನತೆ ನನಗೆ ಆಶೀರ್ವಾದ ಮಾಡುತ್ತಾರೆ. ಎಕ್ಸಿಟ್​ ಪೋಲ್​​ ಸರ್ವೆ ಶೇ 90ರಷ್ಟು ಸತ್ಯವಾಗುತ್ತದೆ ಎಂದರು. ಕರ್ನಾಟಕದಲ್ಲಿ 25 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ದೇಶದಲ್ಲಿ ಎನ್​ಡಿಎ ಹೆಚ್ಚು ಸ್ಥಾನಗಳು ಗೆಲ್ಲುವ ವಿಶ್ವಾಸವಿದೆ ಎಂದರು.

ದೇಶದಲ್ಲಿ ಭರ್ಜರಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮಂಡ್ಯದಲ್ಲಿ ಪೋಸ್ಟಲ್ ಬ್ಯಾಲೆಟ್ ಶುರುವಾಗಿದೆ. ಕೊನೆಯ ಹಂತದ ವರೆಗೂ ಮುನ್ನಡೆಯಲ್ಲಿ ಇರುತ್ತೇನೆ. ನಾನು ಚುನಾವಣೆ ಶುರುವಿನಿಂದಲೂ ಉತ್ಸಾಹದಿಂದ ಇದ್ದೇನೆ.

ಎನ್​ಡಿಎ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಬಗ್ಗೆ ನನಗೆ ಹೆಚ್ಚಿನ ಆಸಕ್ತಿ ಏನೂ ಇಲ್ಲ. ಮಂಡ್ಯ ಜಿಲ್ಲೆಗೆ ನನ್ನ ಕೈಲಾದ ಅಳಿಲು ಸೇವೆಯನ್ನು ಮಾಡುತ್ತೇನೆ. ರಾಜ್ಯಕ್ಕೆ ಏನಾಗಬೇಕೋ ಅದನ್ನು ಮಾಡುವುದು ನನ್ನ ಮೊದಲ ಆದ್ಯತೆ ಎಂದು ಕುಮಾರಸ್ವಾಮಿ ಹೇಳಿದರು.

ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇದಕ್ಕೂ ಮುನ್ನ ಆದಿ ಚುಂಚನಗಿರಿ ಮಠದಲ್ಲಿ ಗಂಗಾದೇಶ್ವರನಿಗೆ ಪೂಜೆ ಸಲ್ಲಿಸಿ ನಿರ್ಮಾಲನಂದ ಸ್ವಾಮಿಜಿ ಬಳಿ ಆಶೀರ್ವಾದ ಪಡೆದರು.

ಲೋಕಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More