AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳ್ಳಕೆರೆ ಶಾಲೆ ಆವರಣದಲ್ಲಿ ವಾಮಾಚಾರ: ತಲೆ ಬುರುಡೆ, ಲಿಂಬೆ ಹಣ್ಣು, ಎಲೆ ಅಡಿಕೆ, ಕುಂಕುಮ ಪತ್ತೆ -ಆತಂಕ

ಚಳ್ಳಕೆರೆ ಶಾಲೆ ಆವರಣದಲ್ಲಿ ವಾಮಾಚಾರ: ತಲೆ ಬುರುಡೆ, ಲಿಂಬೆ ಹಣ್ಣು, ಎಲೆ ಅಡಿಕೆ, ಕುಂಕುಮ ಪತ್ತೆ -ಆತಂಕ

ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಸಾಧು ಶ್ರೀನಾಥ್​

Updated on:Sep 23, 2023 | 9:59 AM

Chitradurga: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯ ಸರ್ಕಾರಿ ಶಾಲೆ ಆವರಣದಲ್ಲಿ ಕಿಡಗೇಡಿಗಳು ವಾಮಾಚಾರ ನಡೆಸಿದ್ದಾರೆ. ಸರ್ಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕರ ಕೊಠಡಿ ಬಳಿ ವಾಮಾಚಾರ (witchcraft, superstition) ನಡೆದಿದೆ.

ಚಿತ್ರದುರ್ಗ, ಸೆಪ್ಟೆಂಬರ್​​ 23 : ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ (Chitradurga district Challakere taluk) ತಿಮ್ಮಪ್ಪನಹಳ್ಳಿಯ ಸರ್ಕಾರಿ ಶಾಲೆ ಆವರಣದಲ್ಲಿ ಕಿಡಗೇಡಿಗಳು ವಾಮಾಚಾರ ನಡೆಸಿದ್ದಾರೆ. ಸರ್ಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕರ ಕೊಠಡಿ ಬಳಿ ವಾಮಾಚಾರ (witchcraft, superstition) ನಡೆದಿದೆ. ತಲೆ ಬುರುಡೆ, ಲಿಂಬೆ ಹಣ್ಣು, ಎಲೆ ಅಡಿಕೆ, ಕುಂಕುಮ ಪತ್ತೆಯಾಗಿದ್ದು, ಶಾಲೆಗೆ (school) ಆಗಮಿಸಿದ ವಿದ್ಯಾರ್ಥಿಗಳು, ‌ಸಿಬ್ಬಂದಿಗೆ ಆತಂಕ (Panic) ಮೂಡಿದೆ.

ಮುಖ್ಯ ಶಿಕ್ಷಕಿ ಮತ್ತು ಸಿಬ್ಬಂದಿಯನ್ನು ಬೆದರಿಸಲು ವಾಮಾಚಾರ ನಡೆಸಿರುವ ಸಾಧ್ಯತೆಯಿದೆ. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ. ತಿಮ್ಮಪ್ಪನಹಳ್ಳಿ ಶಾಲೆಗೆ ತಳಕು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಾಮಾಚಾರಕ್ಕೆ ಬಳಸಿದ ಬುರುಡೆ ಇತರೆ ವಸ್ತುಗಳನ್ನು ಸ್ಥಳದಿಂದ ತೆರವುಗೊಳಿಸಲಾಗಿದೆ.

ಇದನ್ನೂ ಓದಿ: ಹೊಳೆನರಸೀಪುರ: ಖಬರಸ್ತಾನದಲ್ಲಿ ಜೀವಂತ ವ್ಯಕ್ತಿಗಳ ಫೋಟೋ ಇಟ್ಟು ಮಾಟಮಂತ್ರ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 23, 2023 09:58 AM