ನಾಳೆಯ ಎಐಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ದೇಶದ ಬಗ್ಗೆ ಹಲವು ನಿರ್ಣಯ ತೆಗೆದುಕೊಳ್ಳಲಾಗುವುದು: ಖರ್ಗೆ

ಅರುಣ್​ ಕುಮಾರ್​ ಬೆಳ್ಳಿ

Updated on: Apr 07, 2025 | 5:10 PM

ಕಾಂಗ್ರೆಸ್ 2025 ಅನ್ನು ಪಕ್ಷ ಸಂಘಟನೆಯ ವರ್ಷ ಅಂತ ಘೋಷಣೆ ಮಾಡಿದ್ದರೂ ಹಲವು ಪಿಸಿಸಿಗಳಿಗೆ ನೇಮಕಾತಿ ಬಾಕಿಯುಳಿದಿದೆ ಅನ್ನೋದನ್ನು ಭಾಗಶಃ ಒಪ್ಪಿಕೊಂಡ ಮಲ್ಲಿಕಾರ್ಜುನ ಖರ್ಗೆಯವರು, ಹಾಗೇನೂ ಇಲ್ಲ, ಅಸ್ಸಾಂ, ಯುಪಿ, ಬಿಹಾರಗಳಲ್ಲಿ ನೇಮಕಾತಿ ಅಗಿದೆ, ಬೇರೆ ಕೆಲಕಡೆಗಳಲ್ಲಿ ಆಗಬೇಕಿದೆ, ನಾಳೆಯ ಸಭೆಯ ನಂತರ ತಾನು ಮಾತಾಡುವುದಾಗಿ ಹೇಳಿದರು.

ಬೆಂಗಳೂರು, ಏಪ್ರಿಲ್ 7: ನಗರದಲ್ಲಿಂದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಳೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯಿದ್ದು, ದೇಶದ ಬಗ್ಗೆ ಹಲವಾರು ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು. ಯಾವ ವಿಷಯಗಳ ಮೇಲೆ ಚರ್ಚೆ ಅಂತ ಈಗಲೇ ಹೇಳಲಾಗಲ್ಲ, ಸಭೆಯ ನಂತರ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ತಿಳಿಸಲಾಗುವುದು ಎಂದು ಹೇಳಿದ ಖರ್ಗೆಯವರು, ಹಿಂದೆ ನಡೆದ ಸಭೆಗಳಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆಯೂ ಚರ್ಚಿಸಲಾಗುವುದು ಎಂದರು.

ಇದನ್ನೂ ಓದಿ: ಸಿಎಂ ಆರೋಗ್ಯ ವಿಚಾರಿಸಲು ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿದ್ದರಂತೆ: ಜಿ ಪರಮೇಶ್ವರ್, ಗೃಹ ಸಚಿವ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.