AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಪ್ರಕರಣ ಹಿಂಪಡೆಯಬೇಕಾದರೆ ಒಂದು ಸುದೀರ್ಘ ಪ್ರಕ್ರಿಯೆ ನಡೆಯುತ್ತದೆ: ಜಿ ಪರಮೇಶ್ವರ್, ಗೃಹ ಸಚಿವ

ಯಾವುದೇ ಪ್ರಕರಣ ಹಿಂಪಡೆಯಬೇಕಾದರೆ ಒಂದು ಸುದೀರ್ಘ ಪ್ರಕ್ರಿಯೆ ನಡೆಯುತ್ತದೆ: ಜಿ ಪರಮೇಶ್ವರ್, ಗೃಹ ಸಚಿವ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Oct 04, 2023 | 11:53 AM

Share

ಹುಬ್ಳಳ್ಳಿ ಗಲಭೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಕರಣ ಹಿಂಪಡೆಯುವಂತೆ ಸೂಚಿಸಿ ಪತ್ರ ಬರೆದಿರುವ ಬಗ್ಗೆ ಕೇಳಿದಾಗ ಸಚಿವ ಪರಮೇಶ್ವರ್, ಆದು ಹಾಗಲ್ಲ ಆದಕ್ಕಾಗಿ ಒಂದು ಸಮಗ್ರ ಪ್ರಕ್ರಿಯೆ ನಡೆಯಬೇಕಾಗುತ್ತದೆ; ಶಾಸಕರು ಅಥವಾ ಸಚಿವರು ಹಾಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದಾಗ ಅವರು ನನಗೆ ತಿಳಿಸುತ್ತಾರೆ, ನಾನು ಪ್ರಸ್ತಾಪವನ್ನು ಸಂಪುಟದ ಉಪ ಸಮಿತಿಯ ಮುಂದಿಡುತ್ತೇನೆ ಎಂದರು.

ಬೆಂಗಳೂರು: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ (G Parameshwara), ವಿಧಾನ ಸಭಾ ಚುನಾವಣೆ ಸಮಯದಲ್ಲಿ ಮತದಾರರ ಪಟ್ಟಿಯಲ್ಲಿ ಕಾನೂನುಬಾಹಿರವಾಗಿ ಹಸ್ತಕ್ಷೇಪ ನಡೆಸಿದ ಚಿಲುಮೆ ಹೆಸರಿನ ಸಂಸ್ಥೆ (Chilume organisation) ಮತ್ತು ಆದರಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ (BBMP commissioner Tushar Girinath) ವಿರುದ್ಧ ತನಿಖೆ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಆಗ ವಿರೋಧ ಪಕ್ಷವಾಗಿದ್ದ ನಾವೇ ತನಿಖೆಗೆ ಒತ್ತಾಯಿಸಿದ್ದು, ಆದರಲ್ಲಿ ತುಷಾರ್ ಗಿರಿನಾಥ್ ಇನ್ವಾಲ್ವ್ಮೆಂಟ್ ಬಗ್ಗೆ ಗೊತ್ತಿಲ್ಲ, ಪ್ರಕರಣ ಪ್ರಸ್ತುತವಾಗಿ ಯಾವ ಹಂತದಲ್ಲಿದೆ ಅಂತ ಗೊತ್ತಿಲ್ಲ, ಸಂಬಂಧಪಟ್ಟವರು ತನಿಖೆ ಮಾಡುತ್ತಾರೆ, ಗೃಹ ಇಲಾಖೆಗೆ ದೂರು ಬಂದರೆ ಪೊಲೀಸರು ತನಿಖೆ ನಡೆಸುತ್ತಾರೆ ಎಂದು ಹೇಳಿದರು.

ಹುಬ್ಳಳ್ಳಿ ಗಲಭೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಕರಣ ಹಿಂಪಡೆಯುವಂತೆ ಸೂಚಿಸಿ ಪತ್ರ ಬರೆದಿರುವ ಬಗ್ಗೆ ಕೇಳಿದಾಗ ಸಚಿವ ಪರಮೇಶ್ವರ್, ಅದು ಹಾಗಲ್ಲ ಅದಕ್ಕಾಗಿ ಒಂದು ಸಮಗ್ರ ಪ್ರಕ್ರಿಯೆ ನಡೆಯಬೇಕಾಗುತ್ತದೆ; ಶಾಸಕರು ಅಥವಾ ಸಚಿವರು ಹಾಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದಾಗ ಅವರು ನನಗೆ ತಿಳಿಸುತ್ತಾರೆ, ನಾನು ಪ್ರಸ್ತಾಪವನ್ನು ಸಂಪುಟದ ಉಪ ಸಮಿತಿಯ ಮುಂದಿಡುತ್ತೇನೆ, ಸಮಿತಿಯು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆಯಾಮ ಮತ್ತು ಸೆಕ್ಷನ್ ಗಳನ್ನು ಪರಾಮರ್ಶಿಸುತ್ತದೆ. ನಂತರ ಅದನ್ನು ಕ್ಯಾಬಿನೆಟ್ ಕಳಿಸಲಾಗುತ್ತದೆ. ಸಂಪುಟ ಅದನ್ನು ಅಂಗೀಕರಿಸಿದರೆ ಅಮಾಯಕರ ಬಿಡುಗಡೆಯಾಗುತ್ತದೆ, ಅಲ್ಲೂ ಯಾರಾದರೂ ಆಕ್ಷೇಪವೆತ್ತಿದರೆ ಪ್ರಕರಣ ವಾಪಸ್ಸು ಹೋಗುತ್ತದೆ ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 04, 2023 11:52 AM

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.