ತನಿಖೆಯ ಆದೇಶ ಹಿಂಪಡೆದಿದ್ದು ಕಾನೂನುಬಾಹಿರ, ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Nov 29, 2023 | 5:52 PM

ಡಿಕೆ ಶಿವಕುಮಾರ್ ಅವರ ಅಕ್ರಮ ಆದಾಯಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ತನಿಖೆಗೆ ಆದೇಶ ನೀಡಿದ್ದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಸಲ್ಲಿಸಿದ್ದ ಮೇಲ್ಮನವಿಯನ್ನು ಹಿಂಪಡೆಯ ರಾಜ್ಯ ಉಚ್ಚ ನ್ಯಾಯಾಲಯ ಅನುಮತಿ ನೀಡಿದ್ದು ಶಿವಕುಮಾರ್ ಜೊತೆ ಸರ್ಕಾರಕ್ಕೂ ನಿರಾಳವಾಗಿಸಿದೆ.

ಶಿವಮೊಗ್ಗ: ಇಂದು ಶಿವಮೊಗ್ಗದಲ್ಲಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ಡಿಕೆ ಶಿವಕುಮಾರ್ (DK Shivakumar) ಅವರಿಗೆ ಅಕ್ರಮ ಗಳಿಕೆ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಾಗ ಬಿಎಸ್ ಯಡಿಯೂರಪ್ಪನವರ (BS Yediyurappa) ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಆದೇಶವನ್ನು ಸಮರ್ಥಿಸಿಕೊಂಡರು. ಜಾರಿ ನೀರ್ದೇಶನಾಲಯದ ವರದಿ ಮತ್ತು ಕೋರಿಕೆ ಮೇರೆಗೆ ಶಿವಕುಮಾರ್ ಪ್ರಕರಣವನ್ನು ಸಿಬಿಯ ತನಿಖೆಗೆ ಯಡಿಯೂರಪ್ಪ ಸರ್ಕಾರ ಒಪ್ಪಿಸಿತ್ತು. ಆದರೆ ಆ ಸರ್ಕಾರದ ಆದೇಶವನ್ನು ಸಿದ್ದರಾಮಯ್ಯ ಸರ್ಕಾರ ಹಿಂಪಡೆದಿದ್ದು ಕಾನೂನುಬಾಹಿರ ಎಂದ ವಿಜಯೇಂದ್ರ ಕೋರ್ಟ್ ನಲ್ಲಿ ಸರ್ಕಾರದ ವಾದಕ್ಕೆ ಜಯ ಸಿಕ್ಕಲ್ಲ ಎಂದು ಹೇಳಿದರು. ಶಿವಕುಮಾರ್ ತಪ್ಪಿತಸ್ಥ ಅಥವಾ ಅಪರಾಧಿ ಅಂತ ತಾನು ಹೇಳುತ್ತಿಲ್ಲ ಆದರೆ ಅವರು ನ್ಯಾಯಾಲಯದಲ್ಲಿ ಅವರು ಹೋರಾಡಿ ತಾನು ನಿರಪರಾಧಿ ಅಂತ ಸಾಬೀತು ಮಾಡಲಿ ಎಂದು ವಿಜಯೇಂದ್ರ ಹೇಳಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.