ಸದಾಶಿವನಗರದಲ್ಲಿ ನಾಯಿ ಜೊತೆ ವಾಕಿಂಗ್ ಮಾಡ್ತಿದ್ದ ಮಹಿಳೆ ದರ್ಪ: ಮಾಸ್ಕ್ ಹಾಕಿಲ್ಲವೆಂದು ದೊಣ್ಣೆಯಿಂದ ಮಹಿಳೆಗೆ ಹೊಡೆತ
ಸದಾಶಿನಗರದಲ್ಲಿ ನಾಯಿ ಜೊತೆ ವಾಕಿಂಗ್ ಮಾಡ್ತಿದ್ದ ಮಹಿಳೆ ದರ್ಪ: ಮಾಸ್ಕ್ ಹಾಕಿಲ್ಲವೆಂದು ದೊಣ್ಣೆಯಿಂದ ಮತ್ತೊಬ್ಬ ಮಹಿಳೆಗೆ ಹೊಡೆತ

ಸದಾಶಿವನಗರದಲ್ಲಿ ನಾಯಿ ಜೊತೆ ವಾಕಿಂಗ್ ಮಾಡ್ತಿದ್ದ ಮಹಿಳೆ ದರ್ಪ: ಮಾಸ್ಕ್ ಹಾಕಿಲ್ಲವೆಂದು ದೊಣ್ಣೆಯಿಂದ ಮಹಿಳೆಗೆ ಹೊಡೆತ

ಸಾಧು ಶ್ರೀನಾಥ್​

Updated on: Jun 01, 2021 | 2:49 PM

mask: ಮಾಸ್ಕ್ ಹಾಕಿಕೊಳ್ಳದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಇನ್ನೊಂದು ಮಹಿಳೆ ನಾಯಿಯೊಂದಿಗೆ ವಾಕಿಂಗ್ ಬಂದಿದ್ದರು. ದೊಣ್ಣೆಯಿಂದ ಹೊಡೆದಿದ್ದರಿಂದ ಸಿಟ್ಟಿಗೆದ್ದ ಮಹಿಳೆ ಸ್ಥಳೀಯ ಠಾಣೆಗೆ ದೂರನ್ನು ನೀಡಿದರು. ಸದ್ಯ ನಾಯಿ ಸಮೇತ ಹಲ್ಲೆ ಮಾಡಿದ ಮಹಿಳೆಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಬೆಂಗಳೂರು: ಸದಾಶಿವನಗರದಲ್ಲಿ ಮಾಸ್ಕ್ನ ಸರಿಯಾಗಿ ಧರಿಸದ ಮಹಿಳೆಯೊಬ್ಬರ ಮೇಲೆ ಮತ್ತೊಬ್ಬ ಮಹಿಳೆ ಹಲ್ಲೆ ನಡೆಸಿದ್ದಾರೆ. ಸರಿಯಾಗಿ ಮಾಸ್ಕ್ ಹಾಕದೆ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದರು. ಇದೇ ವೇಳೆ ಮತ್ತೊಬ್ಬ ಮಹಿಳೆ ವಾಕಿಂಗ್​ಗೆ ಬಂದಿದ್ದರು. ಸರಿಯಾಗಿ ಮಾಸ್ಕ್ ಹಾಕಿಲ್ಲವೆಂದು ದೊಣ್ಣೆಯಿಂದ ಮಹಿಳೆ ಹೊಡೆದಿದ್ದಾರೆ. ಮಾಸ್ಕ್ ಸರಿಯಾಗಿ ಹಾಕದಿದ್ದರೆ ಕೇಳಲು ಪೊಲೀಸರಿದ್ದಾರೆ. ನನ್ನನ್ನು ಹೊಡೆಯುವುದಕ್ಕೆ ನೀವು ಯಾರು ಎಂದು ಹಲ್ಲೆಗೊಳಗಾದ ಮಹಿಳೆ ಆಕ್ರೋಶ ಹೊರಹಾಕಿದ್ದಾರೆ.

ಮಾಸ್ಕ್ ಹಾಕಿಕೊಳ್ಳದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಇನ್ನೊಂದು ಮಹಿಳೆ ನಾಯಿಯೊಂದಿಗೆ ವಾಕಿಂಗ್ ಬಂದಿದ್ದರು. ದೊಣ್ಣೆಯಿಂದ ಹೊಡೆದಿದ್ದರಿಂದ ಸಿಟ್ಟಿಗೆದ್ದ ಮಹಿಳೆ ಸ್ಥಳೀಯ ಠಾಣೆಗೆ ದೂರನ್ನು ನೀಡಿದರು. ಸದ್ಯ ನಾಯಿ ಸಮೇತ ಹಲ್ಲೆ ಮಾಡಿದ ಮಹಿಳೆಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

(woman assaults another woman for not wearing mask in sadashivanagar bangalore)

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು