ಮುರುಡೇಶ್ವರದಲ್ಲಿ ಕಡಲಬ್ಬರಕ್ಕೆ ಬೀಚ್ ಬಳಿಯಿದ್ದ ಗೂಡಂಗಡಿಗಳಿಗೆ ಹಾನಿ, ಮಹಿಳೆ ಕಣ್ಣೀರು

Edited By: ಆಯೇಷಾ ಬಾನು

Updated on: Jan 16, 2024 | 11:58 AM

ನಿನ್ನೆ‌ ರಾತ್ರಿ ಏಕಾಏಕಿ ಸಮುದ್ರದ ಅಬ್ಬರ ಹೆಚ್ಚಾದ ಹಿನ್ನೆಲೆ ಗೂಡಂಗಡಿಗಳು ಹಾನಿಗೊಳಗಾಗಿವೆ. ಸಮುದ್ರದ ಅಲೆಯಲ್ಲಿ ಗೂಡಂಗಡಿಗಳ ಹಲವು ಸಾಮಾನುಗಳು ಕೊಚ್ಚಿ ಹೋಗಿವೆ. ತನ್ನ ಅಂಗಡಿ ಹಾನಿಗೊಳಗಾದದ್ದು ನೋಡಿ ಮಹಿಳೆಯೊಬ್ಬರು ಕಣ್ಣೀರಿಟ್ಟ ದೃಶ್ಯ ಮನಕಲಕುವಂತಿದೆ.

ಉತ್ತರ ಕನ್ನಡ, ಜ.16: ಮುರುಡೇಶ್ವರದಲ್ಲಿ (Murudeshwara) ಕಡಲಬ್ಬರದಿಂದ ಗೂಡಂಗಡಿಗಳಿಗೆ ಹಾನಿ ಉಂಟಾಗಿದೆ. ಅಲೆಗಳ ಹೊಡೆತಕ್ಕೆ ಬೀಚ್​ ಬಳಿ ಇದ್ದ ಗೂಡಂಗಡಿಗಳಲ್ಲಿನ ವಸ್ತುಗಳು ಸಮುದ್ರಪಾಲಾಗಿವೆ. ಇದರಿಂದಾಗಿ ಅಂಗಡಿ ಇಟ್ಟುಕೊಂಡಿದ್ದ ಮಾಲೀಕರೀಗ ಕಂಗಾಲಾಗಿದ್ದು ಕಣ್ಣೀರು ಹಾಕುವಂತ ಪರಿಸ್ಥಿತಿ ಎದುರಾಗಿದೆ. ನಿನ್ನೆ ಸಂಕ್ರಾಂತಿ ಹಬ್ಬ ಹಿನ್ನೆಲೆ ಮುರುಡೇಶ್ವರನ ಸನ್ನಿಧಾನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರು. ಒಳ್ಳೆಯ ವ್ಯಾಪಾರದ ನಿರೀಕ್ಷೆಯಲ್ಲಿದ್ದ ವ್ಯಾಪಾರಿಗಳಿಗೆ ಸಮುದ್ರದ ಅಲೆಗಳು ಕಣ್ಣೀರು ತರಿಸಿವೆ.

ನಿನ್ನೆ‌ ರಾತ್ರಿ ಏಕಾಏಕಿ ಸಮುದ್ರದ ಅಬ್ಬರ ಹೆಚ್ಚಾದ ಹಿನ್ನೆಲೆ ಗೂಡಂಗಡಿಗಳು ಹಾನಿಗೊಳಗಾಗಿವೆ. ಸಮುದ್ರದ ಅಲೆಯಲ್ಲಿ ಗೂಡಂಗಡಿಗಳ ಹಲವು ಸಾಮಾನುಗಳು ಕೊಚ್ಚಿ ಹೋಗಿವೆ. ತನ್ನ ಅಂಗಡಿ ಹಾನಿಗೊಳಗಾದದ್ದು ನೋಡಿ ಮಹಿಳೆಯೊಬ್ಬರು ಕಣ್ಣೀರಿಟ್ಟ ದೃಶ್ಯ ಮನಕಲಕುವಂತಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More