AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಆನ್‌ಲೈನ್‌ ಶಿಕ್ಷಣಕ್ಕಾಗಿ ಕಿವಿಯೋಲೆ ಮಾರಿದ ತಾಯಿ, ಎಲ್ಲಿ?

[lazy-load-videos-and-sticky-control id=”cvXGnUyOkgs”] ಕೊರೊನಾ ಸಂಕಷ್ಟದ ಸಮಯದಲ್ಲಿ ಶಾಲೆ ಕಾಲೇಜುಗಳು ಆನ್‌ಲೈನ್‌ ಕ್ಲಾಸ್‌ ಆರಂಭಿಸಿವೆ. ಹೀಗಾಗಿ ಮಗಳ ಆನ್‌ಲೈನ್ ಕ್ಲಾಸ್‌ಗೆ ಅಗತ್ಯವಿರುವ ಮೊಬೈಲ್ ಕೊಡಿಸಲು ಬಡ ತಾಯಿಯೊಬ್ಬಳು ತನ್ನ ಕಿವಿ ಓಲೆ ಮಾರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಶೆಡ್‌ವೊಂದರಲ್ಲಿ ವಾಸವಿರುವ ಸರೋಜಿನಿ ಬೇವಿನಕಟ್ಟಿ ಎಂಬ ದೇವದಾಸಿ ಮಹಿಳೆ ತನ್ನ ಮಗಳ ಆನ್‌ಲೈನ್ ಶಿಕ್ಷಣಕ್ಕಾಗಿ 10 ಸಾವಿರಕ್ಕೆ ತನ್ನ ಬಂಗಾರದ ಕಿವಿ ಓಲೆ ಮಾರಿದ್ದಾಳೆ. ನಿತ್ಯ ಜೀವನಕ್ಕಾಗಿ ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಈ ದೇವದಾಸಿ […]

ಮಗಳ ಆನ್‌ಲೈನ್‌ ಶಿಕ್ಷಣಕ್ಕಾಗಿ ಕಿವಿಯೋಲೆ ಮಾರಿದ ತಾಯಿ, ಎಲ್ಲಿ?
Guru
| Edited By: |

Updated on:Aug 05, 2020 | 5:47 PM

Share

[lazy-load-videos-and-sticky-control id=”cvXGnUyOkgs”]

ಕೊರೊನಾ ಸಂಕಷ್ಟದ ಸಮಯದಲ್ಲಿ ಶಾಲೆ ಕಾಲೇಜುಗಳು ಆನ್‌ಲೈನ್‌ ಕ್ಲಾಸ್‌ ಆರಂಭಿಸಿವೆ. ಹೀಗಾಗಿ ಮಗಳ ಆನ್‌ಲೈನ್ ಕ್ಲಾಸ್‌ಗೆ ಅಗತ್ಯವಿರುವ ಮೊಬೈಲ್ ಕೊಡಿಸಲು ಬಡ ತಾಯಿಯೊಬ್ಬಳು ತನ್ನ ಕಿವಿ ಓಲೆ ಮಾರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಶೆಡ್‌ವೊಂದರಲ್ಲಿ ವಾಸವಿರುವ ಸರೋಜಿನಿ ಬೇವಿನಕಟ್ಟಿ ಎಂಬ ದೇವದಾಸಿ ಮಹಿಳೆ ತನ್ನ ಮಗಳ ಆನ್‌ಲೈನ್ ಶಿಕ್ಷಣಕ್ಕಾಗಿ 10 ಸಾವಿರಕ್ಕೆ ತನ್ನ ಬಂಗಾರದ ಕಿವಿ ಓಲೆ ಮಾರಿದ್ದಾಳೆ. ನಿತ್ಯ ಜೀವನಕ್ಕಾಗಿ ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಈ ದೇವದಾಸಿ ಮಹಿಳೆ ಈಗ ದುಡಿಯಲು ಕೆಲಸವೂ ಇಲ್ಲದೆ ಪರದಾಡುತ್ತಿದ್ದಾಳೆ.

ಸಚಿವೆ ಶಶಿಕಲಾ ಜೊಲ್ಲೆ ತುರ್ತು ಗಮನಕ್ಕೆ ಆದ್ರೆ ತನ್ನ ಮಗಳು ರೇಣುಕಾಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂದು ಆಕೆಯ ಆನ್‌ಲೈನ್ ಶಿಕ್ಷಣಕ್ಕಾಗಿ ತನ್ನ ಬಂಗಾರದ ಕಿವಿ ಓಲೆ ಮಾರಿದ್ದಾಳೆ. ಮೂಲತಃ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದ ಸರೋಜಿನಿ ಬೆವಿನಕಟ್ಟಿ, ಹಲವು ವರ್ಷಗಳಿಂದ ಬೆಳಗಾವಿಯಲ್ಲಿ ವಾಸವಿದ್ದಾಳೆ.

ಇದ್ದ ಒಬ್ಬ ಮಗ ರೇಲ್ವೆ ಅಪಘಾತದಲ್ಲಿ ಕಾಲು ಮುರಿದುಕೊಂಡಿದ್ದು ಕೆಲಸವಿಲ್ಲದೇ ಮನೆಯಲ್ಲಿಯೇ ಇರುತ್ತಾನೆ. ಇನ್ನು ಮಗಳು ರೇಣುಕಾ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಕೊರೊನಾ ಭೀತಿ ಹಿನ್ನೆಲೆ ಮನೆಗೆಲಸಕ್ಕೂ ಕೂಡಾ ಈಗ ಯಾರೂ ಕರೆಯುತ್ತಿಲ್ಲ.

ಮನೆಮನೆಗೆ ಹೋಗಿ ಧವಸ ಧಾನ್ಯ ಬೇಡಿ ಜೀವನ ಸಾಗಿಸಲು ಅವಕಾಶ ಸಿಗುತ್ತಿಲ್ಲವೆಂದು ಕಣ್ಣೀರು ಹಾಕುತ್ತಿರುವ ಸರೋಜಿನಿ, ತನಗೆ ಸೂಕ್ತ ನೆರವು ನೀಡುವಂತೆ ಬೆಳಗಾವಿಯವರೇ ಆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸೇರಿದಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾಳೆ.

Published On - 4:31 pm, Wed, 5 August 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ