ಗದಗ: ಸಿಎಂ ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಮಹಿಳೆ; ಮನವಿ ಮಾಡಿದ್ದೇನು?

Edited By: ಕಿರಣ್ ಹನುಮಂತ್​ ಮಾದಾರ್

Updated on: Nov 03, 2023 | 8:49 PM

ಕರ್ನಾಟಕ ರಾಜ್ಯ ನಾಮಕರಣಕ್ಕೆ 50ರ ಸಂಭ್ರಮ ಹಿನ್ನಲೆ ಇಂದು(ನ.3) ಗದಗ(Gadag) ದಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಸ್ಥಳೀಯರಿಂದ ಮನವಿ ಪತ್ರ ಸ್ವೀಕರಿಸಿದರು. ಈ ವೇಳೆ ಆಗಮಿಸಿದ ಮಹಿಳೆಯೊಬ್ಬರು ಬೆಳೆ ನಷ್ಟವಾಗಿದೆ. ಪರಿಹಾರ ದೊರಕಿಸಿ ಎಂದು ಸಿಎಂ ಬಳಿ ಅಳಲು ತೋಡಿಕೊಂಡರು.

ಗದಗ, ನ.03: ಕರ್ನಾಟಕ ರಾಜ್ಯ ನಾಮಕರಣಕ್ಕೆ 50ರ ಸಂಭ್ರಮ ಹಿನ್ನಲೆ ಇಂದು(ನ.3) ಗದಗ(Gadag) ದಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವರಾದ ಹೆಚ್​.ಕೆ.ಪಾಟೀಲ್, ಕೆ.ಹೆಚ್​.ಮುನಿಯಪ್ಪ, ತಂಗಡಗಿ ಭೈರತಿ ಸುರೇಶ್​, ಲಕ್ಷ್ಮೀ ಹೆಬ್ಬಾಳ್ಕರ್​ ಸೇರಿ ಹಲವರು ಉಪಸ್ಥಿತರಿದ್ದರು. ಇನ್ನು ಕಾರ್ಯಕ್ರಮದ ಬಳಿಕ ಸ್ಥಳೀಯರಿಂದ ಮನವಿ ಪತ್ರ ಸ್ವೀಕರಿಸಿದರು. ಈ ವೇಳೆ ಆಗಮಿಸಿದ ಮಹಿಳೆಯೊಬ್ಬರು ಬೆಳೆ ನಷ್ಟವಾಗಿದೆ. ಪರಿಹಾರ ದೊರಕಿಸಿ ಎಂದು ಸಿಎಂ ಬಳಿ ಅಳಲು ತೋಡಿಕೊಂಡರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More