ಮದ್ವೆಯಾದ 20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಮಾಜಿ ಪ್ರಿಯಕರ

Updated on: Dec 15, 2025 | 9:13 PM

ಪ್ರೇಯಸಿ ತನ್ನ ಬಿಟ್ಟು ಬೇರೊಬ್ಬನ ಜೊತೆ ಮದುವೆಯಾಗಿರುವುದಕ್ಕೆ ಕೋಪಗೊಂಡ ಪ್ರಿಯಕರ ಆಕೆ ಜೊತೆಗಿನ ಫೋಟೋ, ವಿಡಿಯೋಗಳನ್ನು ವೈರಲ್ ಮಾಡಿದ್ದಾನೆ. ಆ ಫೋಟೋ ಯುವತಿಯ ಗಂಡನ ಫೋನ್​​​ಗೆ ಬಂದಿದ್ದು, 20 ದಿನ ಹಿಂದೆಷ್ಟೇ ಕಟ್ಟಿದ್ದ ತಾಳಿಯನ್ನು ಕಿತ್ತುಕೊಂಡು ಹೆಂಡ್ತಿಯನ್ನು ಮನೆಯಿಂದ ಆಚೆ ಹಾಕಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಲಿಚೆರ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ (ಡಿಸೆಂಬರ್ 15): ಪ್ರೇಯಸಿ ತನ್ನ ಬಿಟ್ಟು ಬೇರೊಬ್ಬನ ಜೊತೆ ಮದುವೆಯಾಗಿರುವುದಕ್ಕೆ ಕೋಪಗೊಂಡ ಪ್ರಿಯಕರ ಆಕೆ ಜೊತೆಗಿನ ಫೋಟೋ, ವಿಡಿಯೋಗಳನ್ನು ವೈರಲ್ ಮಾಡಿದ್ದಾನೆ. ಆ ಫೋಟೋ ಯುವತಿಯ ಗಂಡನ ಫೋನ್​​​ಗೆ ಬಂದಿದ್ದು, 20 ದಿನ ಹಿಂದೆಷ್ಟೇ ಕಟ್ಟಿದ್ದ ತಾಳಿಯನ್ನು ಕಿತ್ತುಕೊಂಡು ಹೆಂಡ್ತಿಯನ್ನು ಮನೆಯಿಂದ ಆಚೆ ಹಾಕಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಲಿಚೆರ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಅಂಬರೀಶ್ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ. ಆದ್ರೆ, ಯುವತಿ ಕಳೆದ 20 ದಿನಗಳ ಹಿಂದಷ್ಟೇ ಬೇರೆ ಹುಡುಗನ ಜೊತೆ ಮದುವೆಯಾಗಿದ್ದಳು. ಇದರಿಂದ ಕೆರಳಿದ ಪ್ರಿಯಕರ ಅಂಬರೀಶ್, ಖಾಸಗಿ ವಿಡಿಯೋವನ್ನು ಪ್ರೇಯಿಸಿ ಪತಿಗೆ ಕಳುಹಿಸಿದ್ದಾನೆ. ಇದರಿಂದ ಪ್ರೇಯಿಸಿ ದಾಂಪತ್ಯ ಜೀವನ ಮುರಿಬಿದ್ದಿದೆ. ಇದರಿಂದ ಕಂಗಾಲಾದ ಯುವತಿ, ನ್ಯಾಯಕ್ಕಾಗಿ ಪ್ರಿಯಕರನ ಮುಂದೆ ಪ್ರತಿಭಟನೆ ನಡೆಸಿದ್ದಾಳೆ. ತನ್ನ ಜೀವನ ಹಾಳುಮಾಡಿದ ಅಂಬರೀಶ್​ ನನ್ನ ಜೀವನ ಸರಿಪಡಿಸಬೇಕು ಆಗ್ರಹಿಸಿದ್ದು, ಈ ಸಂಬಂಧ ಅಂಬರೀಶ್ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ಸದ್ಯ ಅಂಬರೀಶ್ ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ನವವಿವಾಹಿತೆ ಸಂಸಾರ ಹಾಳು ಮಾಡಿದ ಆ ವಿಡಿಯೋ: ಮಾಜಿ ಲವರ್​​ ಮನೆ ಮುಂದೆ ಧರಣಿ ಕುಳಿತ ಮಹಿಳೆ

Published on: Dec 15, 2025 09:12 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More