ವಿಡಿಯೋ: ಹುಲ್ಲು ಹೊತ್ತ ಟ್ರ್ಯಾಕ್ಟರ್ ಜಸ್ಟ್ ಜೀಪ್​ಗೆ‌ ತಾಗಿತ್ತೆಂದು ರೈತನ ಮೇಲೆ ಲೇಡಿ ಪಿಎಸ್​ಐ ಹಲ್ಲೆ ಆರೋಪ

Edited By:

Updated on: Dec 02, 2022 | 5:42 PM

ರೈತನ ಮೇಲೆ ಮಹಿಳಾ ಪಿಎಸ್​ಐ ಗೀತಾಂಜಲಿ ಶಿಂಧೆ ಹಲ್ಲೆಗೈದು ನಿಂದಿಸಿರುವಂತಹ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

ರಾಯಚೂರು: ರೈತನ ಮೇಲೆ ಮಹಿಳಾ ಪಿಎಸ್​ಐ (Woman PSI) ಹಲ್ಲೆಗೈದು ನಿಂದಿಸಿರುವಂತಹ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಸಿರವಾರ ಠಾಣೆ ಪಿಎಸ್​ಐ ಗೀತಾಂಜಲಿ ಶಿಂಧೆ ವಿರುದ್ಧ ರೈತ ಲಿಂಗಯ್ಯ ಆರೋಪ ಮಾಡಿದ್ದಾರೆ. ಹುಲ್ಲಿನ ಮೇವು ಲೋಡ್ ತುಂಬಿಕೊಂಡು ಲಿಂಗಯ್ಯ ಟ್ರ್ಯಾಕ್ಟರ್​ನಲ್ಲಿ ಹೊರಟಿದ್ದು, ಈ ವೇಳೆ ಪೊಲೀಸ್ ಜೀಪ್​ಗೆ ಟ್ರ್ಯಾಕ್ಟರ್ ಡಿಕ್ಕಿ ಆಗಿದೆ ಎಂಬ ಆರೋಪ ಮಾಡಲಾಗಿದೆ. ಲೇಡಿ ಪಿಎಸ್​ಐ ಜೀಪ್​ಗೆ‌ ಟ್ರ್ಯಾಕ್ಟರ್ ಟಚ್ ಆದ ಹಿನ್ನೆಲೆ ಕಿರಿಕ್ ಮಾಡಿದ್ದಾರೆ. PSI ಗೀತಾಂಜಲಿ ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಟ್ರ್ಯಾಕ್ಟರ್ ಕೀ ಕಸಿದುಕೊಂಡು ರೈತ ಲಿಂಗಯ್ಯನನ್ನು ಠಾಣೆಗೆ ಕರೆದೊಯ್ದ ಆರೋಪ ಮಾಡಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published on: Dec 02, 2022 05:41 PM
Follow Us
Web contact

TV9 Kannada

Read More