Bangalore rain: ಕೆಆರ್ ಸರ್ಕಲ್​ನಲ್ಲಿ ಮುಳುಗಿದ ಆಟೋ, ಮಹಿಳೆ ಗ್ರೇಟ್ ಎಸ್ಕೇಪ್

Rakesh Nayak Manchi

Updated on: May 21, 2023 | 7:59 PM

ಬೆಂಗಳೂರು ನಗರದ ಕೆಆರ್​ ಸರ್ಕಲ್​ ಅಂಡರ್​ಪಾಸ್​ನಲ್ಲಿ ಕಾರು ಮಾತ್ರವಲ್ಲದೆ ಆಟೋ ಕೂಡ ಮುಳುಗಡೆಯಾಗಿದ್ದು, ಇದರಲ್ಲಿದ್ದ ಮಹಿಳೆಯೊಬ್ಬರನ್ನು ರಕ್ಷಣೆ ಮಾಡಲಾಗಿದೆ.

ಬೆಂಗಳೂರು: ನಗರದ ಹಲವೆಡೆ ಸುರಿದ ಧಾರಾಕಾರ ಮಳೆಗೆ (Bangalore Rain) ಅವಾಂತರವೇ ಸೃಷ್ಟಿಯಾಗಿದೆ. ಕೆಆರ್ ಸರ್ಕಲ್ (KR Circle) ಅಂಡರ್​ಪಾಸ್​ನಲ್ಲಿ ಕಾರು ಮುಳುಗಡೆಯಾಗಿ ಓರ್ವ ಯುವತಿ ಸಾವನ್ನಪ್ಪಿದ ಘಟನೆ ನಡೆದಿದೆ. ಇದೇ ಅಂಡರ್​ಪಾಸ್​ನಲ್ಲಿ ಆಟೋ ಕೂಡ ಮುಳುಗಡೆಯಾಗಿದ್ದು, ಇದರಲ್ಲಿದ್ದ ಮಹಿಳೆಯನ್ನು ಕೂಡ ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಈಜಾಡಿಕೊಂಡು ಹೋಗಿ ಮಹಿಳೆಯನ್ನು ರಕ್ಷಿಸಿದ್ದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: Bangalore Rain: ಬೆಂಗಳೂರು ಮಳೆ ದುರಂತ, ಮಾನವೀಯತೆ ಮರೆತ ಸೇಂಟ್‌ ಮಾರ್ಥಾಸ್‌ ಆಸ್ಪತ್ರೆ, ಇನ್ಫೋಸಿಸ್ ಉದ್ಯೋಗಿ ಬಲಿ

ಮತ್ತಷ್ಟು ವಿಡಿಯೋ ಸ್ಟೋರಿಗಳ ವೀಕ್ಷಣೆಗೆ ಇಲ್ಲಿ ಕ್ಲಿಕ್ ಮಾಡಿ

Published on: May 21, 2023 07:58 PM
Follow Us
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.